ಹಾಸನ, 29 ಜೂನ್ (ಹಿ.ಸ.) :
ಆ್ಯಂಕರ್ : ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಡಿಯಲ್ಲಿ ಹಸಿಶುಂಠಿ ಪ್ರತಿ ಕ್ವಿಂಟಾಲ್ ಗೆ ರೂ 2,445 ರಂತೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಇವರ ವತಿಯಿಂದ ಖರೀದಿಸಲಾಗುವುದು.
ಜು.2 ರಿಂದ ಜು.31 ರವರೆಗೆ ನೋಂದಣಿಯೊಂದಿಗೆ ಖರೀದಿ ಪ್ರಕ್ರಿಯೆಯು ಹಾಸನ ಮತ್ತು ಬೇಲೂರು ಎಪಿಎಂಸಿ ಮಾರುಕಟ್ಟೆ ಪ್ರಾಂಗಣದ ಖರೀದಿ ಕೇಂದ್ರಗಳಲ್ಲಿ ನಡೆಯುತ್ತದೆ.
ಖರೀದಿ ಕೇಂದ್ರಗಳಲ್ಲಿ ಪ್ರೂಟ್ಸ್ ಐಡಿ ಮೂಲಕ ನೊಂದಾಯಿಸಿಕೊಳ್ಳಬಹುದು. ಪ್ರತಿ ರೈತರಿಂದ ಎಕರೆಗೆ 30 ಕ್ವಿಂಟಾಲ್ ನಂತೆ ಗರಿಷ್ಠ 60 ಕ್ವಿಂಟಾಲ್ ಹಸಿಶುಂಠಿಯನ್ನು ಖರೀದಿಸಲಾಗುವುದು.
ರೈತರ ಆಧಾರ್ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಉತ್ಪನ್ನದ ಮೌಲ್ಯವನ್ನು ಡಿಬಿಟಿ ಮೂಲಕ ಜಮಾ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಖರೀದಿ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಕೃಷಿ ಮಾರಾಟ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa