ಭುವನೇಶ್ವರ, 29 ಜೂನ್ (ಹಿ.ಸ.) :
ಆ್ಯಂಕರ್ : ಓಡಿಶಾ ಪ್ರಸಿದ್ಧ ರಥಯಾತ್ರೆಯ ಸಂದರ್ಭದಲ್ಲಿ ಪುರಿಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಹಲವು ಜೀವಹಾನಿ ಸಂಭವಿಸಿದ ಹಿನ್ನೆಲೆಯಲ್ಲಿ, ಓಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ವೈಯಕ್ತಿಕವಾಗಿ ಮತ್ತು ಸರ್ಕಾರದ ಪರವಾಗಿ ಸಾರ್ವಜನಿಕ ಕ್ಷಮೆಯಾಚಿಸಿದ್ದಾರೆ.
ಭದ್ರತಾ ವ್ಯವಸ್ಥೆಯಲ್ಲಿನ ಲೋಪಗಳ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿರಿರುವ ಅವರು “ಈ ರೀತಿಯ ದುರ್ಘಟನೆ ಎಂದಿಗೂ ಕ್ಷಮಿಸದಾಯಕವಲ್ಲ. ತಕ್ಷಣವೇ ತನಿಖೆ ಆರಂಭಿಸಲಾಗುತ್ತದೆ,” ಎಂದು ಹೇಳಿದ್ದಾರೆ.
ದುರಂತಕ್ಕೆ ಕಾರಣರಾದವರ ವಿರುದ್ಧ ಕಟ್ಟುನಿಟ್ಟಿನ ಹಾಗೂ ಅನುಕರಣೀಯ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa