ಅರಣ್ಯ ಸಚಿವರನ್ನು ಭೇಟಿ ಮಾಡಿದ ಅನಿಲ್ ಕುಂಬ್ಳೆ
ಬೆಂಗಳೂರು, 03 ಜೂನ್ (ಹಿ.ಸ.) : ಆ್ಯಂಕರ್ : ಖ್ಯಾತ ಮಾಜಿ ಕ್ರಿಕೆಟಿಗ ಮತ್ತು ಪರಿಸರ ಪ್ರೇಮಿ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಹಾಗೂ ವನ್ಯಜೀವಿ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಅವರು ಇಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ ಮಾಡಿ ಧನ್ಯವಾದ ತಿಳಿಸಿದರು. ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆ ಬಗ್ಗೆ
Meet


ಬೆಂಗಳೂರು, 03 ಜೂನ್ (ಹಿ.ಸ.) :

ಆ್ಯಂಕರ್ : ಖ್ಯಾತ ಮಾಜಿ ಕ್ರಿಕೆಟಿಗ ಮತ್ತು ಪರಿಸರ ಪ್ರೇಮಿ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಹಾಗೂ ವನ್ಯಜೀವಿ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಅವರು ಇಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ ಮಾಡಿ ಧನ್ಯವಾದ ತಿಳಿಸಿದರು.

ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆ ಬಗ್ಗೆ ಅಪಾರ ಆಸಕ್ತಿ ಹೊಂದಿರುವ ಕುಂಬ್ಳೆ, ಯಾವುದೇ ಸಂಭಾವನೆ ಇಲ್ಲದೆ ಈ ಜವಾಬ್ದಾರಿಯನ್ನು ಸ್ವೀಕರಿಸಿದ್ದಾರೆ. ಇದು ಅವರ ಪರಿಸರ ನಿಷ್ಠೆಯ ಪ್ರತಿಬಿಂಬವಾಗಿದೆ. ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಹಿಂದೆ ಸೇವೆ ಸಲ್ಲಿಸಿದ್ದ ಅನುಭವವು ಈಗಿನ ಭೂಮಿಕೆಗೆ ಸಹಕಾರಿಯಾಗಲಿದೆ ಎಂದು ಸಚಿವ ಖಂಡ್ರೆ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande