ಬಕ್ರಿದ್ ಹಬ್ಬದ ಸಂದರ್ಭದಲ್ಲಿ ಗೋ ಹತ್ಯೆ ನಿಷೇದ ಕಾಯ್ದೆ ಉಲ್ಲಂಘನೆಯಾಗದ0ತೆ ಕ್ರಮ ಕೈಗೊಳ್ಳಲು ಸೂಚನೆ
ಬಕ್ರಿದ್ ಹಬ್ಬದ ಸಂದರ್ಭದಲ್ಲಿ ಗೋ ಹತ್ಯೆ ನಿಷೇದ ಕಾಯ್ದೆ ಉಲ್ಲಂಘನೆಯಾಗದ0ತೆ ಕ್ರಮ ಕೈಗೊಳ್ಳಲು ಸೂಚನೆ
ಕೋಲಾರ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಬಕ್ರಿದ್ ಹಬ್ಬದ ಹಿನ್ನಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು.


ಬಕ್ರಿದ್ ಹಬ್ಬದ ಸಂದರ್ಭದಲ್ಲಿ ಗೋ ಹತ್ಯೆ ನಿಷೇದ ಕಾಯ್ದೆ ಉಲ್ಲಂಘನೆಯಾಗದ0ತೆ ಕ್ರಮ ಕೈಗೊಳ್ಳಲು ಸೂಚನೆ

ಕೋಲಾರ, ಜೂನ್ ೦೩ (ಹಿ.ಸ) :

ಆ್ಯಂಕರ್ : ಜೂನ್ ೭ ರಂದು ನಡೆಯುವ ಬಕ್ರೀದ್ ಹಬ್ಬದ ನೆಪದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಉಲ್ಲಂಘನೆ ಆಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಆರ್.ರವಿ ಸೂಚಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಏರ್ಪಡಿಸಿದ್ದ, ಬಕ್ರೀದ್ ಅಕ್ರಮ ಒಂಟೆ ಮತ್ತು ಗೋವುಗಳ ಹತ್ಯೆ ತಡೆಗಟ್ಟಲು ಜಿಲ್ಲಾ ಸಮಿತಿ ಹಾಗೂ ಕೋಲಾರ ಜಿಲ್ಲಾ ಪ್ರಾಣಿ ದಯಾ ಸಂಘದ ಸಭೆಯಲ್ಲಿ ಮಾತನಾಡಿದರು.

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ ೨೦೨೦ ಜಾರಿಯಲ್ಲಿದ್ದು ಎಲ್ಲಾ ವಯಸ್ಸಿನ ಹಸು ಕರು, ಗೂಳಿ, ಎತ್ತು ಮತ್ತು ೧೩ ವರ್ಷ ದೊಳಗಿನ ಎಮ್ಮೆ/ಕೋಣ ವಧೆಯನ್ನು ನಿಷೇಧಿಸಲಾಗಿದ್ದು ಬಕ್ರೀದ್ ಹಬ್ಬ ಹಾಗೂ ಇತರೆ ಸಂದರ್ಭಗಳಲ್ಲಿ ಸದರಿ ಜಾನುವಾರುಗಳ ಅನಧಿಕೃತ ಸಾಗಾಣಿಕೆ ವಧೆಯನ್ನು ತಡೆಯುವ ಕೆಲಸವನ್ನು ಅಧಿಕಾರಿಗಳು ಮಾಡಬೇಕಾಗಿದೆ ಎಂದರು.

ಅಲ್ಪಸAಖ್ಯಾತ ಸಮುದಾಯದವರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಗೋಹತ್ಯೆ ನಿಷೇದ ಕಾಯ್ದೆ ಬಗ್ಗೆ ಅರಿವು ಮೂಡಿಸಲು ಸ್ಥಳೀಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಪರಿಸರ ಇಲಾಖೆಯ ಮೂಲಕ ಧ್ವನಿವರ್ಧಕ ಬಳಸಿ ಪ್ರಚಾರ ನೀಡುವುದು ಹಾಗೂ ಅಲ್ಪಸಂಖ್ಯಾತ ಸಮುದಾಯದ ಜನಪ್ರತಿನಿಧಿಗಳು ಹಾಗೂ ಮಸೀದಿ ಮುಖಂಡರುಗಳು ಮತ್ತು ನಗರದ ಎಲ್ಲಾ ವಾರ್ಡ್ಗಳ ನಗರಸಭೆ ಸದಸ್ಯರುಗಳೊಂದಿಗೆ, ಸಭೆಯನ್ನು ನಡೆಸಿ, ಸದರಿ ಕಾಯ್ದೆ ಬಗ್ಗೆ ಅರಿವು ಮೂಡಿಸಿ ಗೋಹತ್ಯೆ ತಡೆಗಟ್ಟುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಹಬ್ಬದ ದಿನಗಳಲ್ಲಿ ಉತ್ಪತ್ತಿಯಾಗುವ ಪ್ರಾಣಿತ್ಯಾಜ್ಯವನ್ನು ವಾರ್ಡ್ ಗಳ ವಾರು ಸಂಗ್ರಹಿಸಿ ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲು ನಗರಸಭೆ, ಸಂಬAಧ ಮಾಲಿನ್ಯ ನಿಯಂತ್ರಣ ಇಲಾಖೆಯವರು ಕ್ರಮ ವಹಿಸಬೇಕು. ಬೀದಿ ನಾಯಿಗಳ ಸಂತಾನ ನಿಯಂತ್ರಣ ಮಾಡಲು ಎಬಿಸಿ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದರು.

ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ,ಪಶು ವೈದ್ಯಕೀಯ ಅಧಿಕಾರಿ,ಇವರೊಂದಿಗೆ ಸಾರಿಗೆ ಇಲಾಖೆಯಿಂದ ಜಿಲ್ಲೆಯ ಚೆಕ್ ಪೋಸ್ಟ್ ಗಳಲ್ಲಿ ಅನುಮಾನಸ್ಪದ ಪ್ರದೇಶಗಳಲ್ಲಿ ಕಟ್ಟುನಿಟ್ಟಾಗಿ ಕರ್ತವ್ಯ ನಿರ್ವಹಿಸಿ ಅನಧಿಕೃತ ಜಾನುವಾರು ಸಾಗಾಣಿಕೆ ವಾಹನಗಳ ತಪಾಸಣೆ ನಡೆಸುವಂತೆ ಹಾಗೂ ಒಂದು ವೇಳೆ ಅಂತಹ ವಾಹನಗಳು ಕಂಡುಬAದಲ್ಲಿ ಕಾನೂನು ಕ್ರಮವಹಿಸಿ ವಾಹನದಲ್ಲಿರುವ ಜಾನುವಾರುಗಳನ್ನು ರಕ್ಷಿಸಿ ಪೊಲೀಸ್ ಹಾಗೂ ಪಶುಸಂಗೋಪನೆ ಇಲಾಖೆಯ ಸಹಯೋಗದೊಂದಿಗೆ ಗೋಶಾಲೆಗಳಿಗೆ ಸೇರಿಸುವ ಕಾರ್ಯವನ್ನು ಮಾಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ್.ಪಿ.ಬಾಗೇವಾಡಿ, ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ನಿಖಿಲ್.ಬಿ, ಕೆಜಿಎಫ್ ಡಿವೈಎಸ್ಪಿ,ಪಾಂಡುರAಗ, ಕೋಲಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ನಟೇಶ್, ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕರಾದ ಮಧುಸೂಧನ್ ರೆಡ್ಡಿ,ಕೋಲಾರ ನಗರಸಭಾ ಆಯುಕ್ತರಾದ ಪ್ರಸಾದ್,ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನಮ್ಮ,ಪಶು ಸಂಗೋಪನಾ ಇಲಾಖೆ ಕೆಜಿಎಫ್ ತಾಲ್ಲೂಕು ಸಹಾಯಕ ನಿರ್ದೇಶಕರಾದ ಡಾ.ತ್ರಿಮೂರ್ತಿ ನಾಯಕ್ ಭಾಗವಹಿಸಿದ್ದರು.

ಚಿತ್ರ : ಕೋಲಾರ ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಬಕ್ರಿದ್ ಹಬ್ಬದ ಹಿನ್ನಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande