ಬಳ್ಳಾರಿ, 03 ಜೂನ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆ.ವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ತ್ರೆಮಾಸಿಕ ನಿರ್ವಹಣೆ ಕಾರ್ಯ ಹಮ್ಮಿಕೊಳ್ಳುತ್ತಿರುವುದರಿಂದ ನಾಳೆ ಬೆಳಿಗ್ಗೆ 07 ಗಂಟೆಯಿ0ದ ಸಂಜೆ 06 ಗಂಟೆಯವರೆಗೆ ನಗರದ ಬೆಂಗಳೂರು ರಸ್ತೆ, ಆಂಧ್ರಾಳ್ ರಸ್ತೆ, ಕೊಲ್ಮಿ ಚೌಕ್, ಕಾರ್ಕಲ ತೋಟ, ಬಾಪೂಜಿ ನಗರ, ಮಿಲ್ಲರ್ ಪೇಟೆ, ಮೋತಿ ವೃತ್ತ, ತೇರು ಬೀದಿ, ಇಂಡಸ್ಟಿಯಲ್ ಏರಿಯಾ ಹಂತ-1, ಮಹೇಶ್ ಪೈಪ್ಸ್, ಲಾರಿ ಟರ್ಮಿನಲ್, ಜೈನ್ ಮಾರ್ಕೆಟ್, ಸಾಯಿ ಕಾಲೋನಿ, ಎಪಿಎಂಸಿ, ರಾಣಿತೋಟ, ಮರಿಸ್ವಾಮಿ ಮಠ, ದೊಡ್ಡ ಮಾರ್ಕೆಟ್, ತೋಪಿಗಲ್ಲಿ, ಬೊಮ್ಮನಾಳ್ ರೋಡ್ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್