ಬಳ್ಳಾರಿ : ವಸತಿ ಶಾಲೆಗಳ ಆಯ್ಕೆ ಪಟ್ಟಿ ಪ್ರಕಟಿಸಲು ಆಗ್ರಹ
ಬಳ್ಳಾರಿ, 03 ಜೂನ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಾದ ಮೊರಾರ್ಜಿ ದೇಸಾಯಿ ಹಾಗೂ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಲು ಕೋರಿ ಕಲ್ಯಾಣ ಕರ್ನಾಟಕ ಕಾರ್ಮಿಕ ಸಂಘಟನೆ ಜಿಲ್ಲಾಡಳಿತಕ್ಕೆ ಮಂಗಳವಾರ ಮನವಿ ಸಲ್ಲಿಸಿದ
ಬಳ್ಳಾರಿ : ವಸತಿ ಶಾಲೆಗಳ ಆಯ್ಕೆ ಪಟ್ಟಿ ಪ್ರಕಟಿಸಲು ಆಗ್ರಹ


ಬಳ್ಳಾರಿ, 03 ಜೂನ್ (ಹಿ.ಸ.) :

ಆ್ಯಂಕರ್ : ಬಳ್ಳಾರಿ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಾದ ಮೊರಾರ್ಜಿ ದೇಸಾಯಿ ಹಾಗೂ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಲು ಕೋರಿ ಕಲ್ಯಾಣ ಕರ್ನಾಟಕ ಕಾರ್ಮಿಕ ಸಂಘಟನೆ ಜಿಲ್ಲಾಡಳಿತಕ್ಕೆ ಮಂಗಳವಾರ ಮನವಿ ಸಲ್ಲಿಸಿದೆ.

ಕಲ್ಯಾಣ ಕರ್ನಾಟಕ ಕಾರ್ಮಿಕ ಸಂಘಟನೆ ಗೌರವ ಅಧ್ಯಕ್ಷ ಜೆ.ವಿ. ಮಂಜುನಾಥ ಅವರ ನೇತೃತ್ವದಲ್ಲಿ ಸಂಘಟನೆಯು ಮನವಿ ಸಲ್ಲಿಸಿದ್ದು, ಜಿಲ್ಲೆಯ ಮೊರಾರ್ಜಿ, ವಾಜಪೇಯಿ, ಅಂಬೇಡ್ಕರ ಮತ್ತು ಇನ್ನತರ ವಸತಿ ಶಾಲೆಗಳ ಪ್ರವೇಶಕ್ಕೆ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬರೆದಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಆಯ್ಕೆಪಟ್ಟಿಯನ್ನು ಬಿಡುಗಡೆ ಆಗಿರುವುದಿಲ್ಲ. ಕಾರಣ ತಕ್ಷಣವೇ ಅಧಿಕಾರಿಗಳು ಆಯ್ಕೆ ಪಟ್ಟಿಯನ್ನು ಪ್ರಕಟಿಸಬೇಕು ಎಂದು ಕೋರಿದರು.

ಕಲ್ಯಾಣ ಕರ್ನಾಟಕ ಕಾರ್ಮಿಕ ಸಂಘಟನೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande