ರಾಯಚೂರು, 03 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ-2025 ನಿಮಿತ್ತ ಪರಿಸರ ಜಾಥಾವನ್ನು ಜೂನ್ 5ರಂದು ಹಮ್ಮಿಕೊಳ್ಳಲಾಗಿದೆ. ಇದೆ ವೇಳೆ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ ಸಸಿ ನೆಡಲಾಗುವುದು.
‘ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು’ ಈ ಘೋಷವಾಕ್ಯದೊಂದಿಗೆ ಅಂದು ಬೆಳಗ್ಗೆ 10.30ಕ್ಕೆ ನಗರದ ಮಹಾತ್ಮಗಾಂದಿ ಕ್ರೀಡಾಂಗಣದ ಮುಖ್ಯದ್ವಾರದಿಂದ ಜಾಥಾ ಆರಂಭವಾಗಿ ಅಂಬೇಡ್ಕರ್ ವೃತ್ತದಿಂದ ಸ್ಟೇಷನ್ ರಸ್ತೆಯಲ್ಲಿನ ಸರ್ಕಾರಿ ಬಾಲಕಿಯರ ಪ್ರೌಢಶಾಲೆವರೆಗೆ ಸಂಚರಿಸಲಿದೆ.
ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿಗಳ ಸಹಯೋಗದಲ್ಲಿ ನಡೆಯುವ ಪರಿಸರ ಜಾಥಾಕ್ಕೆ ಜಿಲ್ಲಾಧಿಕಾರಿಗಳಾದ ನಿತೀಶ್.ಕೆ ಚಾಲನೆ ನೀಡಲಿದ್ಧಾರೆ. ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಾಪಾತ್ರ, ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಪ್ರವೀಣ್ ಎಸ್., ಸಾರ್ವಜನಿಕ ಶಿಕ್ಷನ ಇಲಾಖೆಯ ಉಪ ನಿರ್ದೇಶಕರಾದ ಕೆ.ಡಿ.ಬಡಿಗೇರ ಉಪಸ್ಥಿತರಿರುವರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್