ಬೆಂಗಳೂರು, 03 ಜೂನ್ (ಹಿ.ಸ.) :
ಆ್ಯಂಕರ್ : ಹಣಕಾಸು ಇಲಾಖೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಐಎಎಸ್ ಅಧಿಕಾರಿ ಡಾ. ವಿಶಾಲ್ ಆರ್ ಅವರನ್ನು ತಾತ್ಕಾಲಿಕವಾಗಿ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದೆ. ಈ ಹೊಸ ಜವಾಬ್ದಾರಿ ಅವರು ಈಗಾಗಲೇ ಹೊಂದಿರುವ ಹುದ್ದೆಯೊಂದಿಗೆ ಏಕಕಾಲದಲ್ಲಿ ನಿರ್ವಹಿಸಲಿದ್ದಾರೆ.
ಈ ನೇಮಕಾತಿ ತಕ್ಷಣದಿಂದ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಮುಂದುವರಿಯಲಿದೆ. ಈ ಸಂಬಂಧದ ಆದೇಶವನ್ನು ರಾಜ್ಯಪಾಲರ ಆದೇಶಾನುಸಾರವಾಗಿ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಉಪ ಕಾರ್ಯದರ್ಶಿ ಟಿ. ಮಹಾಂತೇಶ್ ಆದೇಶ ಹೊರಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa