ಬಳ್ಳಾರಿ, 03 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಜಿಲ್ಲೆಯ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ಅಹವಾಲುಗಳ ಸ್ವೀಕಾರ/ಜನ ಸಂಪರ್ಕ ಸಭೆ ಏರ್ಪಡಿಸಲಾಗಿದೆ ಎಂದು ಬಳ್ಳಾರಿ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿದ್ಧರಾಜು.ಸಿ ಅವರು ತಿಳಿಸಿದ್ದಾರೆ.
ಪೊಲೀಸ್ ಅಧೀಕ್ಷಕರಾದ ಸಿದ್ಧರಾಜು.ಸಿ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ಸುರೇಶ್.ಎಂ.ಭಾವಿಮನಿ ಮತ್ತು ನಾಗರೆಡ್ಡಿ ಇವರ ನೇತೃತ್ವದಲ್ಲಿ ಸಿರುಗುಪ್ಪ, ಕುರುಗೋಡು, ಸಂಡೂರು, ಬಳ್ಳಾರಿ ಮತ್ತು ಕಂಪ್ಲಿ ತಾಲ್ಲೂಕು ಕೇಂದ್ರಗಳಲ್ಲಿ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ನಡೆಯಲಿದೆ.
*ಅಹವಾಲು ಸ್ವೀಕರಿಸುವ ದಿನ ಮತ್ತು ಸ್ಥಳ:*
ಜೂನ್ 11 ರಂದು ಬೆಳಿಗ್ಗೆ 11.30 ಗಂಟೆ ಮಧ್ಯಾಹ್ನ 2 ಗಂಟೆಯವರೆಗೆ ಸಿರುಗುಪ್ಪದ ಸಿಡಿಪಿಒ ಕಚೇರಿ ಸಭಾಂಗಣ.
ಜೂನ್ 17 ರಂದು ಬೆಳಿಗ್ಗೆ 11.30 ಗಂಟೆ ಮಧ್ಯಾಹ್ನ 02 ಗಂಟೆಯವರೆಗೆ ಕುರುಗೋಡು ತಹಶೀಲ್ದಾರರ ಕಚೇರಿ ಸಭಾಂಗಣ.
ಜೂನ್ 19 ರಂದು ಬೆಳಿಗ್ಗೆ 11.30 ಗಂಟೆ ಮಧ್ಯಾಹ್ನ 02 ಗಂಟೆಯವರೆಗೆ ಸಂಡೂರು ತಹಶೀಲ್ದಾರರ ಕಚೇರಿ ಸಭಾಂಗಣ.
ಜೂನ್ 24 ರಂದು ಬೆಳಿಗ್ಗೆ 11.30 ಗಂಟೆ ಮಧ್ಯಾಹ್ನ 02 ಗಂಟೆಯವರೆಗೆ ಬಳ್ಳಾರಿಯ ಹೊಸ ಡಿಸಿ ಕಚೇರಿಯ ತಹಶೀಲ್ದಾರರ ಕಚೇರಿ ಸಭಾಂಗಣ.
ಜೂನ್ 26 ರಂದು ಬೆಳಿಗ್ಗೆ 11.30 ಗಂಟೆ ಮಧ್ಯಾಹ್ನ 02 ಗಂಟೆಯವರೆಗೆ ಕಂಪ್ಲಿಯ ತಹಶೀಲ್ದಾರರ ಕಚೇರಿ ಸಭಾಂಗಣ.
ಕಾರ್ಯಕ್ರಮದಲ್ಲಿ ಕರ್ನಾಟಕ ಲೋಕಾಯುಕ್ತ ಬೆಂಗಳೂರು ಇವರಿಗೆ ಅರ್ಜಿ ಸಲ್ಲಿಸಲು ನಮೂನೆ/ಫಾರಂ ನಂ.01 ಮತ್ತು 02 ಗಳನ್ನು ಸಹ ನೀಡಲಾಗುವುದು. ಕುಂದು ಕೊರತೆಗಳಿರುವ ಸಾರ್ವಜನಿಕರು ದೂರುಗಳಿದ್ದಲ್ಲಿ ನಿಗದಿಪಡಿಸಿದ ದಿನದಂದು ಅರ್ಜಿ ನಮೂನೆಯಲ್ಲಿ ಅಹವಾಲು ನೀಡಬಹುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್