ನವದೆಹಲಿ, 03 ಜೂನ್ (ಹಿ.ಸ.) :
ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಸ್ಸಾಂನಲ್ಲಿನ ಪ್ರಸ್ತುತ ಪ್ರವಾಹ ಪರಿಸ್ಥಿತಿಯ ಬಗ್ಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾಸ್ ಗೆ ದೂರವಾಣಿ ಕರೆ ಮಾಡಿ ವಿಚಾರಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಿಸ್ವಾಸ
ಅಸ್ಸಾಂ ಮತ್ತು ಪಕ್ಕದ ರಾಜ್ಯಗಳಲ್ಲಿ ನಿರಂತರ ಮಳೆಯಿಂದಾಗಿ ಪ್ರವಾಹ ಉಂಟಾಗಿ ಅನೇಕ ಜನರ ಜೀವನ ಹೇಗೆ ಪರಿಣಾಮ ಬೀರಿದೆ ಎಂಬುದರ ಕುರಿತು ನಾನು ಅವರಿಗೆ ವಿವರಿಸಿದೆ. ರಾಜ್ಯ ಸರ್ಕಾರ ಕೈಗೊಂಡಿರುವ ಪರಿಹಾರ ಕಾರ್ಯಾಚರಣೆಯ ಬಗ್ಗೆಯೂ ನಾನು ಅವರಿಗೆ ವಿವರಿಸಿರುವುದಾಗಿ ತಿಳಿಸಿದ್ದಾರೆ.
ಪ್ರಧಾನ ಮಂತ್ರಿಗಳು ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದರು ಮತ್ತು ನಮ್ಮ ಪರಿಹಾರ ಮತ್ತು ಪುನರ್ವಸತಿ ಪ್ರಯತ್ನಗಳಿಗೆ ಕೇಂದ್ರ ಸರ್ಕಾರದಿಂದ ಸಂಪೂರ್ಣ ಬೆಂಬಲದ ಭರವಸೆ ನೀಡಿದರು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa