ಬಳ್ಳಾರಿ : ತಿರುಮಲನಗರ ಸರ್ಕಾರಿ ತೆಲುಗು ಶಾಲೆಯ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ
ಬಳ್ಳಾರಿ, 03 ಜೂನ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ತಾಲೂಕಿನ ತಿರುಮಲನಗರ ಕ್ಯಾಂಪ್‍ನ ಸರಕಾರಿ ತೆಲುಗು ಕಿರಿಯ ಪ್ರಾಥಮಿಕ ಶಾಲೆಗೆ ಮೂಲಭೂತ ಸೌಕರ್ಯ ಒದಗಿಸಲು ಆಗ್ರಹಿಸಿ ಬಳ್ಳಾರಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಛೇರಿ ಮುಂದೆ ಎಐಡಿಎಸ್‍ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನ
ಬಳ್ಳಾರಿ : ತಿರುಮಲನಗರ ಸರ್ಕಾರಿ ತೆಲುಗು ಶಾಲೆಯ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ


ಬಳ್ಳಾರಿ : ತಿರುಮಲನಗರ ಸರ್ಕಾರಿ ತೆಲುಗು ಶಾಲೆಯ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ


ಬಳ್ಳಾರಿ, 03 ಜೂನ್ (ಹಿ.ಸ.) :

ಆ್ಯಂಕರ್ : ಬಳ್ಳಾರಿ ತಾಲೂಕಿನ ತಿರುಮಲನಗರ ಕ್ಯಾಂಪ್‍ನ ಸರಕಾರಿ ತೆಲುಗು ಕಿರಿಯ ಪ್ರಾಥಮಿಕ ಶಾಲೆಗೆ ಮೂಲಭೂತ ಸೌಕರ್ಯ ಒದಗಿಸಲು ಆಗ್ರಹಿಸಿ ಬಳ್ಳಾರಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಛೇರಿ ಮುಂದೆ ಎಐಡಿಎಸ್‍ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಎಐಡಿಎಸ್‍ಓ ಜಿಲ್ಲಾ ಅಧ್ಯಕ್ಷ ಕೆ. ಈರಣ್ಣ ಅವರು, ಬಳ್ಳಾರಿ ತಾಲೂಕಿನ ತಿರುಮಲ ನಗರ್ ಕ್ಯಾಂಪ್, ಅತೀ ಹೆಚ್ಚು ದಿನಗೂಲಿ-ರೈತ ಕಾರ್ಮಿಕರನ್ನು ಹಾಗೂ ವಲಸೆ ಕಾರ್ಮಿಕರನ್ನು ಹೊಂದಿರುವ ಸ್ಥಳ. ಕ್ಯಾಂಪ್‍ನಲ್ಲಿ ಸರ್ಕಾರಿ ತೆಲುಗು ಕಿರಿಯ ಪ್ರಾಥಮಿಕ ಶಾಲೆಯಿದ್ದು, ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿ ಶಿಕ್ಷಣದ ಗುಣಮಟ್ಟವನ್ನು ಕಳೆದುಕೊಳ್ಳುತ್ತಿದೆ ಎಂದು ಹೇಳಿದರು.

ತಿರುಮಲನಗರ ಕ್ಯಾಂಪ್‍ನಲ್ಲಿ ಇರುವ ಶಾಲೆಯು ಮೂರು ಕೊಠಡಿಗಳನ್ನು ಹೊಂದಿದೆ. ಕಟ್ಟಡವು ಸಂಪೂರ್ಣವಾಗಿ ಹಾಳಾಗಿದೆ. ಮಳೆ ಬಂದರೆ ಮೇಲ್ಚಾವಣಿ ಕುಸಿದು ಬೀಳುವ ಸ್ಥಿತಿಯಲ್ಲಿದೆ. ಶೌಚಾಲಯ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲವೇ ಇಲ್ಲ. ಕಾರಣ ಅಧಿಕಾರಿಗಳು ತಕ್ಷಣವೇ ಈ ಶಾಲೆಯ ಕಡೆ ಗಮನ ನೀಡಬೇಕು ಎಂದರು.

ತಿರುಮಲನಗರ ಕ್ಯಾಂಪ್ ಶಾಲೆಯ ಕಟ್ಟಡ ದುರಸ್ತಿಗೊಳಿಸಿ ಮತ್ತು ಕಟ್ಟಡ ಸಂಖ್ಯೆ ಹೆಚ್ಚಿಸಿ. ತಿರುಮಲ ನಗರ ಕ್ಯಾಂಪ್ ಶಾಲೆಗೆ ಶೌಚಾಲಯ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಒದಗಿಸಿ. ಸರ್ಕಾರಿ ತೆಲುಗು ಕಿರಿಯ ಪ್ರಾಥಮಿಕ ಶಾಲೆಯಲ್ಲಿ, ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಿಕ್ಷಣ ಪ್ರಾರಂಭಸಿ. ಶಾಲೆಗೆ ನೂತನ ಕಾಂಪೌಂಡ್ ನಿರ್ಮಿಸಿ ಎಂದು ಅವರು ಆಗ್ರಹಿಸಿದರು.

ಪ್ರತಿಭಟನೆಯ ಅಧ್ಯಕ್ಷತೆಯನ್ನು ಎಐಡಿಎಸ್‍ಓ ಜಿಲ್ಲಾ ಉಪಾಧ್ಯಕ್ಷೆ ಎಂ. ಶಾಂತಿ ವಹಿಸಿದ್ದರು. ಉಮಾ ಮತ್ತು ತಿರುಮಲನಗರ ಕ್ಯಾಂಪ್ ಮಲ್ಲಿಕಾರ್ಜುನ, ದೂಳಪ್ಪ ಮತ್ತು ಗಿರಿಜಮ್ಮ, ವನ್ನೂರಮ್ಮ ಇತರರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande