ಶರ್ಮಿಷ್ಠಾ ಪನೋಲಿಗೆ ಅತ್ಯಾಚಾರ ಬೆದರಿಕೆ : ವರದಿ ಕೇಳಿದ ಎನ್‌ಎಚ್‌ಆರ್‌ಸಿ
ಕೋಲ್ಕತ್ತಾ, 03 ಜೂನ್ (ಹಿ.ಸ.) : ಆ್ಯಂಕರ್ : ಆಪರೇಷನ್ ಸಿಂಧೂರ್ ಕುರಿತು ವಿವಾದಾತ್ಮಕ ಸಾಮಾಜಿಕ ಮಾಧ್ಯಮ ಹೇಳಿಕೆಗಾಗಿ ಬಂಧಿತ ಶರ್ಮಿಷ್ಠಾ ಪನೋಲಿ ಅವರಿಗೆ ಕಸ್ಟಡಿಯಲ್ಲಿ ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಬಂದಿರುವ ಕುರಿತು ಗಂಭೀರ ಆರೋಪಗಳು ಕೇಳಿಬಂದಿವೆ. ಈ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್
ಶರ್ಮಿಷ್ಠಾ ಪನೋಲಿಗೆ ಅತ್ಯಾಚಾರ ಬೆದರಿಕೆ : ವರದಿ ಕೇಳಿದ ಎನ್‌ಎಚ್‌ಆರ್‌ಸಿ


ಕೋಲ್ಕತ್ತಾ, 03 ಜೂನ್ (ಹಿ.ಸ.) :

ಆ್ಯಂಕರ್ : ಆಪರೇಷನ್ ಸಿಂಧೂರ್ ಕುರಿತು ವಿವಾದಾತ್ಮಕ ಸಾಮಾಜಿಕ ಮಾಧ್ಯಮ ಹೇಳಿಕೆಗಾಗಿ ಬಂಧಿತ ಶರ್ಮಿಷ್ಠಾ ಪನೋಲಿ ಅವರಿಗೆ ಕಸ್ಟಡಿಯಲ್ಲಿ ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಬಂದಿರುವ ಕುರಿತು ಗಂಭೀರ ಆರೋಪಗಳು ಕೇಳಿಬಂದಿವೆ. ಈ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ 10 ದಿನಗಳಲ್ಲಿ ವರದಿ ನೀಡಲು ಸೂಚಿಸಿದೆ.

ಪುಣೆಯಲ್ಲಿ ಕಾನೂನು ವಿದ್ಯಾರ್ಥಿನಿಯಾಗಿರುವ ಶರ್ಮಿಷ್ಠಾಳನ್ನು ಕೋಲ್ಕತ್ತಾ ಪೊಲೀಸರು ಗುರುಗ್ರಾಮ್‌ನಲ್ಲಿ ಬಂಧಿಸಿದ್ದರು. ಸೋಷಿಯಲ್ ಮೀಡಿಯಾ ಪೋಸ್ಟ್ ಅಳಿಸಿ ಕ್ಷಮೆ ಯಾಚಿಸಿದ್ದರೂ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಬಂಧನದ ವೇಳೆ ಕಾನೂನು ಪ್ರಕ್ರಿಯೆಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪವಿದೆ.

ಭಾರತೀಯ ಬಾರ್ ಕೌನ್ಸಿಲ್ ಮತ್ತು ದೆಹಲಿ ಬಾರ್ ಕೌನ್ಸಿಲ್ ಈ ಕ್ರಮವನ್ನು ತೀವ್ರವಾಗಿ ಖಂಡಿಸಿ, ಶರ್ಮಿಷ್ಠಾಳ ಬಂಧನವನ್ನು ರಾಜಕೀಯ ಪ್ರೇರಿತ ಎಂದು ವಾಗ್ದಾಳಿ ನಡೆಸಿವೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande