ಆಂಧ್ರದ ಮದನಪಲ್ಲೆ ಬಳಿ ಅಪಘಾತ : ರಾಜ್ಯದ ಮೂವರ ಸಾವು
ಚಿಕ್ಕಬಳ್ಳಾಪುರ, 30 ಜೂನ್ (ಹಿ.ಸ.) : ಆ್ಯಂಕರ್ : ತಿರುಪತಿಯಿಂದ ವಾಪಾಸಾಗುತ್ತಿದ್ದ ಟಿಟಿ ವಾಹನ ಭೀಕರ ಅಪಘಾತಕ್ಕೀಡಾಗಿ ರಾಜ್ಯದ ಮೂವರು ಭಕ್ತರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಆಂಧ್ರದ ಮದನಪಲ್ಲೆ ಸಮೀಪದ ಚೆನ್ನಾಮರ್ರಿ ಮಿಟ್ಟ ಬಳಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಿಂದ ತೆರಳಿದ್ದ
Accident


ಚಿಕ್ಕಬಳ್ಳಾಪುರ, 30 ಜೂನ್ (ಹಿ.ಸ.) :

ಆ್ಯಂಕರ್ : ತಿರುಪತಿಯಿಂದ ವಾಪಾಸಾಗುತ್ತಿದ್ದ ಟಿಟಿ ವಾಹನ ಭೀಕರ ಅಪಘಾತಕ್ಕೀಡಾಗಿ ರಾಜ್ಯದ ಮೂವರು ಭಕ್ತರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಆಂಧ್ರದ ಮದನಪಲ್ಲೆ ಸಮೀಪದ ಚೆನ್ನಾಮರ್ರಿ ಮಿಟ್ಟ ಬಳಿ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಿಂದ ತೆರಳಿದ್ದ ಭಕ್ತರ ವಾಹನವು ಆಂಧ್ರದ ಮದನಪಲ್ಲೆ ಸಮೀಪದ ಚೆನ್ನಾಮರ್ರಿ ಮಿಟ್ಟ ಬಳಿ ಬೃಹತ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಮೇಘರ್ಷ್ (17), ಚರಣ್ (17) ಮತ್ತು ಶ್ರಾವಣಿ (28).ಮೃತಪಟ್ಟಿದ್ದು, ಗಂಭೀರ ಗಾಯಗೊಂಡ ಒಂಬತ್ತು ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮದನಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತದ ಕಾರಣ ಹಾಗೂ ಡಿಕ್ಕಿ ಹೊಡೆದ ವಾಹನದ ಮಾಹಿತಿ ಕುರಿತು ತನಿಖೆ ಮುಂದುವರಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande