ಬಳ್ಳಾರಿ, 30 ಜೂನ್ (ಹಿ.ಸ.) :
ಆ್ಯಂಕರ್ : ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣದ ಕಲಿಕೆಗೆ ಮೊದಲ ಆದ್ಯತೆ ನೀಡಿ, ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆಯಬೇಕು ಎಂದು ಬ್ರಾಹ್ಮಣ ನಿಗಮ ಮಂಡಳಿ ಅಧ್ಯಕ್ಷ ಅಸುಗೋಡು ಜಯಸಿಂಹ ಅವರು ತಿಳಿಸಿದ್ದಾರೆ.
ಶ್ರೀ ಶೃಂಗೇರಿ ಶಾರದಾ ಪೀಠದ, ಶ್ರೀ ಭಾರತೀ ತೀರ್ಥ ಸಭಾಭವನದಲ್ಲಿ ಬಳ್ಳಾರಿ ಬ್ರಾಹ್ಮಣ ಒಕ್ಕೂಟದ ಆಶ್ರಯದಲ್ಲಿ ನಡೆದ
ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕಗಳನ್ನು ಪಡೆದಿರುವ ಬ್ರಾಹ್ಮಣ ವಿದ್ಯಾರ್ಥಿಗಳ `ಪ್ರತಿಭಾ ಪುರಸ್ಕಾರ 2024-25'ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಶಿಕ್ಷಣ, ವಿಜ್ಞಾನ, ಸಂಶೋಧನೆ, ಕ್ರೀಡೆ, ತಂತ್ರಜ್ಞಾನ ಹೀಗೇ ಸಮಾಜದ ಹಲವಾರು ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಸಾಧನೆ ಮಾಡಿ ಪಾಲಕರು, ಗುರುಗಳ ಪ್ರೀತಿಗೆ ಪಾತ್ರರಾಗಬೇಕು. ಪ್ರಸ್ತುತ ದಿನಗಳಲ್ಲಿ ಶಿಕ್ಷಣ ಇಲ್ಲದೇ ಇದ್ದಲ್ಲಿ ಏನನ್ನೂ ಸಾಧಿಸಲು ಸಾಧ್ಯವೇ ಇಲ್ಲ ಎಂದರು.
ಬಳ್ಳಾರಿ ಬ್ರಾಹ್ಮಣ ಒಕ್ಕೂಟದ ಜಿಲ್ಲಾಧ್ಯಕ್ಷ ಆರ್. ಪ್ರಕಾಶ್ ರಾವ್ ಅವರು, ಮಕ್ಕಳು ಸಮಯಕ್ಕೆ ಆದ್ಯತೆ ನೀಡಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದರು.
ಅಡ್ವೊಕೇಟ್ ಜನರಲ್ ಮಲ್ಲನರಾವ್ ಅವರು, ಶಿಕ್ಷಣ ಮತ್ತು ಜ್ಞಾನ ಕಸಿದುಕೊಳ್ಳುವ - ಕಳೆದುಕೊಳ್ಳುವವು ಅಲ್ಲ. ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೇ, ಅಧ್ಯಯನ ಮಾಡಿ, ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದು ಸಾಧನೆ ಮಾಡಿದರೆ ಮಹಾ ಸಂತೋಷ ಎಂದರು.
ಅಖಿಲ ಭಾರತ ಬ್ರಾಹ್ಮಣ ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ, ಜಿಲ್ಲಾ ಸಂಚಾಲಕ ಹಾಗೂ ಒಕ್ಕೂಟದ ಜಿಲ್ಲಾ ಉಪಾಧ್ಯಕ್ಷ ಡಾ. ಡಿ. ಶ್ರೀನಾಥ್ ವೇದಿಕೆಯಲ್ಲಿದ್ದರು. ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ.ಬಿ.ಎನ್. ಮೂರ್ತಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಒಕ್ಕೂಟದ ಸಹ ಕಾರ್ಯದರ್ಶಿ, ಮಹಾನಗರ ಪಾಲಿಕೆ ಮಾಜಿ ಸದಸ್ಯ ನೇಮಕಲ್ ರಾವ್, ಖಜಾಂಚಿ ಅನಿಲ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪ್ರತಿಭಾವಂತ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ನಂತರ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಪ್ರದರ್ಶನಗೊಂಡವು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್