ಹ.ಬೊಹಳ್ಳಿ ಪುರಸಭೆಯಲ್ಲಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
ಹಗರಿಬೊಮ್ಮನಹಳ್ಳಿ , 30 ಜೂನ್ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿನ ಎಸ್.ಎಫ್.ಸಿ. ಯೋಜನೆ ಅಡಿಯಲ್ಲಿ ವ್ಯಕ್ತಿ ಸಂಬಂಧಿತ ಅನುಕೂಲಗಳಿಗೆ ಸಹಾಯ ಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹಗರಿಬೊಮ್ಮನಹಳ್ಳಿ ನಗರದ ಎಂ.ಬಿ.ಬಿ.ಎಸ್, ಬಿ.ಇ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ಪ್ರತಿಭಾನ್ವಿ
ಹ.ಬೊಹಳ್ಳಿ ಪುರಸಭೆಯಲ್ಲಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ


ಹಗರಿಬೊಮ್ಮನಹಳ್ಳಿ , 30 ಜೂನ್ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿನ ಎಸ್.ಎಫ್.ಸಿ. ಯೋಜನೆ ಅಡಿಯಲ್ಲಿ ವ್ಯಕ್ತಿ ಸಂಬಂಧಿತ ಅನುಕೂಲಗಳಿಗೆ ಸಹಾಯ ಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹಗರಿಬೊಮ್ಮನಹಳ್ಳಿ ನಗರದ ಎಂ.ಬಿ.ಬಿ.ಎಸ್, ಬಿ.ಇ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ಖರೀದಿಗಾಗಿ ರೂ.3 ಲಕ್ಷ ರೂಪಾಯಿ, ಬಡಜನರಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು 2 ಲಕ್ಷ ರೂಪಾಯಿ ಹಾಗೂ ವಿದ್ಯಾರ್ಥಿಗಳಿಗೆ ಶೈಕ್ಷಣಿಕಗೆ 2.68 ಲಕ್ಷ ರೂಪಾಯಿಗಳ ಸಹಾಯಧಾನ ನೀಡಲಾಗುವುದು. ಪರಿಶಿಷ್ಟ ಪಂಗಡದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ಖರೀದಿಗಾಗಿ ರೂ.2 ಲಕ್ಷ ರೂಪಾಯಿ ಹಾಗೂ ವಿದ್ಯಾರ್ಥಿಗಳಿಗೆ ಶೈಕ್ಷಣಿಕಗೆ 1.20 ಲಕ್ಷ ರೂಪಾಯಿ ಸಹಾಯಧಾನ ನೀಡಲಾಗುವುದು.

ಹಿಂದುಳಿದ ವರ್ಗದ ಲ್ಯಾಪ್‍ಟಾಪ್ ಖರೀದಿಗಾಗಿ ರೂ. 1.452 ಲಕ್ಷ ರೂಪಾಯಿ ಸಹಾಯ ಧನ ನೀಡಲಾಗುವುದು. ಪುರಸಭೆ ವ್ಯಾಪ್ತಿಯಲ್ಲಿ ಬರುವ ವಿಕಲಚೇತನರ ದಿವ್ಯಾಂಗಿ ರೋಗಿಗಳಿಗೆ ಶಸ್ತ್ರಚಿಕಿತ್ಸೆಗೆ 1.25 ಲಕ್ಷ ರೂಪಾಯಿ ಸಹಾಯ ಧನ ನೀಡಲಾಗುವುದು. ಅಂಗವಿಕಲರ ವ್ಯಾಸಂಗೇತರ ಚಟುವಟಿಕೆಗಳಗೆ 40 ಸಾವಿರ ರೂಪಾಯಿ ಪೆÇ್ರೀತ್ಸಾಹ ಧನ ನೀಡುವುದು. ವಿಕಲಚೇತನರ ಅಭಿವೃದ್ಧಿಗಾಗಿ ಶ್ರಮಿಸುವ ಸರ್ಕಾರೇತರ ಸಂಸ್ಥೆಗಳಿಗೆ 80 ಸಾವಿರ ರೂಪಾಯಿ ಸಹಾಯ ಧನ ನೀಡಲಾಗುವುದು.

ಅರ್ಜಿ ಸಲ್ಲಿಸಲು ಫಲಾನುಭವಿಗಳು ಕುಟುಂಬದ ಜಾತಿ ಆದಾಯ ಪ್ರಮಾಣ ಪತ್ರ, ರೇಷನ್ ಕಾರ್ಡ್, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಬ್ಯಾಂಕ್ ಪಾಸ್ ಬುಕ್, ಇತ್ತಿಚಿನ ನಾಲ್ಕು ಭಾವಚಿತ್ರಗಳು, ಶಿಕ್ಷಣಕ್ಕೆ ಪಸ್ತುತ 2025-26 ನೇ ಸಾಲಿನ ಶೈಕ್ಷಣಿಕ ವ್ಯಾಸಂಗ ಪ್ರಮಾಣ ಪತ್ರ, ಪ್ರವೇಶಾತಿ ಪಡೆದ ರಶೀದಿ, ಪ್ರತಿ ಅಂಕಪಟ್ಟಿಗಳು ಹಾಗೂ ತಾಲೂಕು ಸಮಾಜ ಕಲ್ಯಾಣ ಇಲಾಖೆ ಹಗರಿಬೊಮ್ಮನಹಳ್ಳಿ ಇವರಿಂದ 2025-26ನೇ ಸಾಲಿನಲ್ಲಿ ಶೈಕ್ಷಣಿಕ ಸಹಾಯಧನ ಪಡೆಯದಿರುವ ಬಗ್ಗೆ ದೃಢೀಕರಣ ಪತ್ರ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸುವ ಫಲಾನುಭವಿಗಳು ನಿಗಧಿಪಡಿಸಿದ ವಿದ್ಯಾರ್ಹತೆಯ ಅಂಕಪಟ್ಟಿಗಳೊಂದಿಗೆ ಅರ್ಜಿ ಸಲ್ಲಿಸತಕ್ಕದ್ದು.

ಅಂಗವಿಕಲರ ಕಲ್ಯಾಣ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸುವ ಅಂಗವಿಕಲರು ಸಂಬಂಧಿಸಿದ ಅರ್ಜಿ ನಮೂನೆಯನ್ನು ಪುರಸಭೆ ಕಚೇರಿಯಲ್ಲಿ ಪಡೆದು ಸಲ್ಲಿಸತಕ್ಕದ್ದು, ಅರ್ಹ ಫಲಾನುಭವಿಗಳು ಜುಲೈ.14 ರೊಳಗಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಕಚೇರಿ ವೇಳೆಯಲ್ಲಿ ಅರ್ಜಿ ಸಲ್ಲಿಸಬೇಕೆಂದು ಹಗರಿಬೊಮ್ಮನಹಳ್ಳಿ ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande