ಚೆನಾಬ್ ನದಿಯ ಪ್ರವಾಹ ಭೀತಿ : ಸಲಾಲ್ ಅಣೆಕಟ್ಟಿನ ಗೇಟ್‌ ತೆರೆಯಲು ನಿರ್ಧಾರ
ಜಮ್ಮು, 30 ಜೂನ್ (ಹಿ.ಸ.) : ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಚೆನಾಬ್ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾಗಿದ ಪರಿಣಾಮವಾಗಿ, ಸ್ಥಳೀಯ ಆಡಳಿತ ಸಲಾಲ್ ಅಣೆಕಟ್ಟಿನ ಹಲವು ಗೇಟ್‌ಗಳನ್ನು ತೆರೆಯಲು ನಿರ್ಧರಿಸಿದೆ. ಅಧಿಕಾರಿಗಳ ಪ್ರಕಾರ, ಹೆಚ್ಚುವರಿ ನೀರನ್
Gate


ಜಮ್ಮು, 30 ಜೂನ್ (ಹಿ.ಸ.) :

ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಚೆನಾಬ್ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾಗಿದ ಪರಿಣಾಮವಾಗಿ, ಸ್ಥಳೀಯ ಆಡಳಿತ ಸಲಾಲ್ ಅಣೆಕಟ್ಟಿನ ಹಲವು ಗೇಟ್‌ಗಳನ್ನು ತೆರೆಯಲು ನಿರ್ಧರಿಸಿದೆ.

ಅಧಿಕಾರಿಗಳ ಪ್ರಕಾರ, ಹೆಚ್ಚುವರಿ ನೀರನ್ನು ಸುರಕ್ಷಿತವಾಗಿ ಹೊರಹಾಕುವುದು ಹಾಗೂ ಕೆಳಭಾಗದ ಪ್ರದೇಶಗಳಲ್ಲಿ ಸಂಭವಿಸಬಹುದಾದ ಪ್ರವಾಹದ ಅಪಾಯವನ್ನು ತಡೆಯುವುದು ಈ ಕ್ರಮದ ಮುಖ್ಯ ಉದ್ದೇಶವಾಗಿದೆ. ರಕ್ಷಣಾ ಕ್ರಮವಾಗಿ, ನದಿ ದಂಡೆ ಪ್ರದೇಶದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಡೋಡಾ-ಕಿಶ್ತ್ವಾರ್-ರಾಂಬನ್ ಪ್ರದೇಶದ ಉಪ ಮಹಾನಿರ್ದೇಶಕ (ಡಿಐಜಿ) ಶ್ರೀಧರ್ ಪಾಟೀಲ್ ಅವರು, ಚೆನಾಬ್ ನದಿಯಲ್ಲಿ ನೀರಿನ ಮಟ್ಟವು ಗಂಭೀರವಾಗಿ ಹೆಚ್ಚಾಗಿದೆ. ಎಲ್ಲರೂ ಈ ಪರಿಸ್ಥಿತಿಯ ಗಂಭೀರತೆಯನ್ನು ಅರಿತುಕೊಳ್ಳಬೇಕು. ನದಿಗಳ ಬಳಿ ಹೋಗುವುದು ಸಂಪೂರ್ಣ ಅಪಾಯಕರವಾಗಿದೆ, ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande