ಮಾಲೀಕರು, ಗುತ್ತಿಗೆದಾರರು ಕಾರ್ಮಿಕರಿಗೆ ಅವಶ್ಯಕ ಮಾಹಿತಿ ನೀಡುವಂತೆ ಸೂಚನೆ
ರಾಯಚೂರು, 30 ಜೂನ್ (ಹಿ.ಸ.) : ಆ್ಯಂಕರ್ : ಕಾರ್ಮಿಕ ಇಲಾಖೆಯಿಂದ ಜಿಲ್ಲೆಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಸದಸ್ಯತ್ವ ಪಡೆದಿರುವ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯಗಳು ಒದಗಿಸಲಾಗುತ್ತಿದ್ದು, ಮಾಲೀಕರು ಮತ್ತು ಗುತ್ತಿಗೆದಾರರು ಕಾರ್ಮಿಕರಿಗೆ ಅವಶ್ಯಕ
ಮಾಲೀಕರು, ಗುತ್ತಿಗೆದಾರರು ಕಾರ್ಮಿಕರಿಗೆ ಅವಶ್ಯಕ ಮಾಹಿತಿ ನೀಡುವಂತೆ ಸೂಚನೆ


ರಾಯಚೂರು, 30 ಜೂನ್ (ಹಿ.ಸ.) :

ಆ್ಯಂಕರ್ : ಕಾರ್ಮಿಕ ಇಲಾಖೆಯಿಂದ ಜಿಲ್ಲೆಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಸದಸ್ಯತ್ವ ಪಡೆದಿರುವ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯಗಳು ಒದಗಿಸಲಾಗುತ್ತಿದ್ದು, ಮಾಲೀಕರು ಮತ್ತು ಗುತ್ತಿಗೆದಾರರು ಕಾರ್ಮಿಕರಿಗೆ ಅವಶ್ಯಕ ಮಾಹಿತಿಯನ್ನು ನೀಡುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಮತಿ ಆರತಿ ಅವರು ತಿಳಿಸಿದ್ದಾರೆ.

ಕಟ್ಟಡ ನಿರ್ಮಾಣ ಸ್ಥಳದ ಮಾಲೀಕರು ಮತ್ತು ಗುತ್ತಿಗೆದಾರರು ನಿಮ್ಮ ಸಂಪೂರ್ಣ ಹೆಸರು ಮತ್ತು ವಿಳಾಸ ದೂರವಾಣಿ ಸಂಖ್ಯೆಯನ್ನು ಉದ್ಯೋಗ ಪ್ರಮಾಣ ಪತ್ರದಲ್ಲಿ ಭರ್ತಿ ಮಾಡುವುದು ಅವಶ್ಯಕವಾಗಿದೆ. ಜಿಲ್ಲೆಯಲ್ಲಿ ಕೆಲವು ಮಾಲೀಕರು ಹಾಗೂ ಗುತ್ತಿಗೆದಾರರು ಉದ್ಯೋಗ ಪ್ರಮಾಣ ಪತ್ರದಲ್ಲಿನ ಅವಶ್ಯಕ ಮಾಹಿತಿಯನ್ನು ನೀಡಲು ನಿರಕರಿಸುತ್ತಾರೆಂದು ಕಾರ್ಮಿಕರು ಮತ್ತು ಸಂಘಟನೆಗಳು ದೂರು ನೀಡಿರುತ್ತಾರೆ. ಆದ್ದರಿಂದ ಕಟ್ಟದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಮಾಲೀಕರು ತಮ್ಮ ಕಟ್ಟಡ ನಿರ್ಮಾಣದ ವಿಳಾಸ ನೀಡುವುದರ ಮೂಲಕ ಸಹಕರಿಸಬೇಕೆಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande