ಹೈದರಾಬಾದ್ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ – ಆರು ಕಾರ್ಮಿಕರ ಸಾವು
ಹೈದರಾಬಾದ್, 30 ಜೂನ್ (ಹಿ.ಸ.) : ಆ್ಯಂಕರ್ : ಹೈದರಾಬಾದ್ ನ ಸಂಗರೆಡ್ಡಿ ಜಿಲ್ಲೆಯ ಪಸುಮಿಲಾರಾಮ್ ಕೈಗಾರಿಕಾ ಪ್ರದೇಶದಲ್ಲಿನ ಸಿಗಾಚಿ ರಾಸಾಯನಿಕ ಕಾರ್ಖಾನೆಯಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಭಾರಿ ಸ್ಫೋಟದಲ್ಲಿ ಆರು ಕಾರ್ಮಿಕರು ಮೃತಪಟ್ಟಿದ್ದು, 20 ಜನ ಗಂಭೀರ ಗಾಯಗೊಂಡಿದ್ದಾರೆ. ಸ್ಫೋಟದ ನಂತರ ಬೆಂಕಿ
Factor fire


ಹೈದರಾಬಾದ್, 30 ಜೂನ್ (ಹಿ.ಸ.) :

ಆ್ಯಂಕರ್ : ಹೈದರಾಬಾದ್ ನ ಸಂಗರೆಡ್ಡಿ ಜಿಲ್ಲೆಯ ಪಸುಮಿಲಾರಾಮ್ ಕೈಗಾರಿಕಾ ಪ್ರದೇಶದಲ್ಲಿನ ಸಿಗಾಚಿ ರಾಸಾಯನಿಕ ಕಾರ್ಖಾನೆಯಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಭಾರಿ ಸ್ಫೋಟದಲ್ಲಿ ಆರು ಕಾರ್ಮಿಕರು ಮೃತಪಟ್ಟಿದ್ದು, 20 ಜನ ಗಂಭೀರ ಗಾಯಗೊಂಡಿದ್ದಾರೆ.

ಸ್ಫೋಟದ ನಂತರ ಬೆಂಕಿ ವ್ಯಾಪಕವಾಗಿ ಹರಡಿದ್ದು, 11 ಅಗ್ನಿಶಾಮಕ ವಾಹನಗಳು ಕಾರ್ಯನಿರತವಿವೆ.

ಸ್ಥಳಕ್ಕೆ ಜಿಲ್ಲಾಧಿಕಾರಿ ಪ್ರವೀಣ್ಯ, ಎಸ್‌ಪಿ ಪರಿತೋಷ್, ಎನ್‌ಡಿಆರ್‌ಎಫ್ ತಂಡಗಳು ಆಗಮಿಸಿ ಪರಿಹಾರ ಕಾರ್ಯಗಳನ್ನು ಕೈಗೊಂಡಿವೆ. ಅಪಘಾತದ ಕಾರಣ ಇನ್ನೂ ತಿಳಿದಿಲ್ಲ, ತನಿಖೆ ನಡೆಯುತ್ತಿದ್ದು ಸುತ್ತಮುತ್ತಲಿನ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande