ರಾಯಚೂರು, 30 ಜೂನ್ (ಹಿ.ಸ.) :
ಆ್ಯಂಕರ್ : ತೋಟಗಾರಿಕೆ ಇಲಾಖೆಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ತಾಳೆಬೆಳೆ, ಸಮಗ್ರ ತೋಗಟಗಾರಿಕೆ ಅಭಿವೃದ್ಧಿ ಹಾಗೂ ಹನಿ ನೀರಾವರಿ ಯೋಜನೆಗಳಿಗೆ ಸಹಾಯಧನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ ಅಡಿಯಲ್ಲಿ ಜಿಲ್ಲೆಗೆ ಹಣ್ಣಿನ ಬೆಳೆಗಳಾದ ಬಾಳೆ, ಮಾವು, ಹಾಗೂ ಪಪಾಯ, ಕೃಷಿಹೊಂಡಾ, ಮಿನಿ ಟ್ರ್ಯಾಕ್ಟರ್ ಖರೀದಿಗೆ, ತೋಟಗಾರಿಕೆಯಲ್ಲಿ ಬಳಸುವ ಔಷದಗಳಿಗೆ ಮತ್ತು ಈರಳ್ಳಿ ಶೇಖರಣ ಘಟಕ, ಫಾರ್ಮಗೇಟ್ ಪ್ಯಾಕಹೌಸ್ ನಿರ್ಮಾಣ ಮಾಡಿದ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ತೋಟಗಾರಿಕೆ ಇಲಾಖೆಯಿಂದ ಸಹಾಯಧನ ನೀಡಲಾಗುತ್ತಿದ್ದು, ಆಸಕ್ತ ರೈತರು ಅರ್ಜಿಗಳು ಸಂಬಂಧಿಸಿದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಾಲೂಕು ಕಚೇರಿಗಳಿಗೆ ಸಲ್ಲಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶದಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್