ಕೊಪ್ಪಳ, 30 ಜೂನ್ (ಹಿ.ಸ.) :
ಆ್ಯಂಕರ್: ಐಐಎಸಿ, ಐಐಟಿ & ಎನ್ಐಟಿ ಸಂಸ್ಥೆಗಳ ಮೂಲಕ ಆರ್ಟಿಫಿಶಿಯಲ್ & ಮಷಿನ್ ಲರ್ನಿಂಗ್ (Artificial Intelligence and Machine Learning) ವೃತ್ತಿಪರ ಕೋರ್ಸ್ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಎಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ/ ತರಬೇತಿ ನೀಡುವ ಸಂಬಂಧ ಅರ್ಜಿ ಸಲ್ಲಿಸಲಾಗಿದೆ ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆಯಲ್ಲಿ ಐಐಎಸಿ, ಐಐಟಿ & ಎನ್ಐಟಿ ಸಂಸ್ಥೆಗಳ ಮೂಲಕ ಆರ್ಟಿಫಿಶಿಯಲ್ & ಮಷಿನ್ ಲರ್ನಿಂಗ್ ವೃತ್ತಿಪರ ಕೋರ್ಸ್ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವೀಧರರಿಗೆ ರೂ. 15,000 ಗಳ ಶಿಷ್ಯವೇತನ ನೀಡಲಾಗುವುದೆಂದು ಕೆಲವು ಷರತ್ತಿಗೊಳಪಟ್ಟು ಮಂಜೂರಾತಿ ನೀಡಿ ಆದೇಶಿಸಿರುತ್ತಾರೆ. ಸರ್ಕಾರದ ಆದೇಶದನ್ವಯ ತರಬೇತಿಗೆ ಸಂಬಂಧಿಸಿದಂತೆ ನಿಯಮಾನುಸಾರ ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಉಚಿತವಾಗಿ ಮಾಧ್ಯಮಗಳ ಮತ್ತು ಪತ್ರಿಕೆಯ ಮುಖಾಂತರ ವ್ಯಾಪಕವಾಗಿ ಪ್ರಚಾರ ನೀಡಿ, ಆಫ್ಲೈನ್ ಮುಖಾಂತರ ಅರ್ಜಿಯನ್ನು ಮತ್ತೊಮ್ಮೆ ಆಹ್ವಾನಿಸಲು ಸೂಚಿಸಿರುತ್ತಾರೆ.
ವೃತ್ತಿಪರ ತರಬೇತಿ ಕೋರ್ಸ್ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡಗಳ ಆಸಕ್ತ ಇಂಜಿನಿಯರಿಂಗ್ ಪದವೀಧರರು ಕೊಪ್ಪಳ ಜಿಲ್ಲೆಯಲ್ಲಿರುವ ತಾಲೂಕಾಧಿಕಾರಿಗಳು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಗಂಗಾವತಿ, ಕುಷ್ಟಗಿ ಮತ್ತು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ/ಯಲಬುರ್ಗಾ ಕಛೇರಿಗೆ ಸಂಪರ್ಕಿಸಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಜುಲೈ 4 ಕೊನೆಯ ದಿನಾಂಕವಾಗಿದ್ದು, ತದನಂತರ ಸ್ವೀಕೃತವಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಸ್ವೀಕೃತವಾದ ಅರ್ಜಿಗಳನ್ನು ಜು. 5ರಂದು ಪರಿಶೀಲನೆ (ಜಿಲ್ಲಾಮಟ್ಟದ ಅಧಿಕಾರಿಗಳಿಂದ ಪರಿಶೀಲನೆ ಮಾಡಿ ದೃಢೀಕರಣ) ಮಾಡಲಾಗುವುದು ಹಾಗೂ ಪರಿಶೀಲಿಸಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಕೇಂದ್ರ ಕಛೇರಿಗೆ ಜು. 7ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ ಕಛೇರಿಯನ್ನು ಸಂಪರ್ಕಿಸುವಂತೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್