ಬೆಂಗಳೂರು, 30 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಕಾಂಗ್ರೆಸ್ ಪಕ್ಷದೊಳಗಿನ ಅಸಮಾಧಾನ ಬಹಿರಂಗಗೊಂಡಿದ್ದು, ಬಿಆರ್ ಪಾಟೀಲ್ ಮತ್ತು ರಾಜೂ ಕಾಗೆ ಸೇರಿದಂತೆ ಕೆಲವರು ತಮ್ಮ ಅಸಮಾಧಾನ ಬಹಿರಂಗವಾಗಿ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪಕ್ಷದ ಹೈಕಮಾಂಡ್ ಮಧ್ಯಪ್ರವೇಶಿಸಿದೆ.
ಕಳೆದ ಎರಡು ವಾರಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಡೆದಿರುವ ಬೆಳವಣಿಗೆ ಕುರಿತು ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಲು ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಬೆಂಗಳೂರಿಗೆ ಆಗಮಿಸಿದ್ದಾರೆ
ಅವರು ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಶಾಸಕರೊಂದಿಗೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 1.30ಕ್ಕೆ ಬಿಆರ್ ಪಾಟೀಲ್ ಮತ್ತು 2 ಗಂಟೆಗೆ ರಾಜೂ ಕಾಗೆಯೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.
ಎರಡು ದಿನ ಕರ್ನಾಟಕದಲ್ಲೇ ತಂಗಲಿರುವ ಸುರ್ಜೆವಾಲಾ, ಬೆಂಗಳೂರು ಭಾಗದ 40ಕ್ಕೂ ಹೆಚ್ಚು ಶಾಸಕರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa