ಕೊಪ್ಪಳ, 30 ಜೂನ್ (ಹಿ.ಸ.) :
ಆ್ಯಂಕರ್ : ಜೂ.26 ರಂದು ನಿಗದಿಪಡಿಸಿದ್ದ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಿ ನಾಳೆ 01 ಮರು ನಿಗದಿಗೊಳಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಸಮಿತಿ ಅಧ್ಯಕ್ಷರಾದ ಬಾಲಚಂದ್ರನ್ ಸ್ಯಾಮುವೆಲ್ ಅವರು ವಹಿಸಿಕೊಳ್ಳುವರು. ಬೆಳಿಗ್ಗೆ 11 ಗಂಟೆಗೆ ಭಾಗ್ಯನಗರದ ಪಟ್ಟಣ ಪಂಚಾಯತಿ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ.
ಸಭೆಗೆ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಗೂ ಹಿಂದಿನ ಸಭೆಯ ನಡವಳಿಗಳ ಪ್ರಕಾರ ಪಾಲನಾ ವರದಿಯೊಂದಿಗೆ ಖುದ್ದಾಗಿ ಹಾಜರಾಗಬೇಕು ಎಂಧು ಕೊಪ್ಪಳ ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್