ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ
ಕೊಪ್ಪಳ , 4 ಜೂನ್ (ಹಿ.ಸ.) ಆ್ಯಂಕರ್: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ವೀರಶೈವ ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ(ಪ್ರವರ್ಗ-|||ಬಿ) ಅಭಿವೃದ್ಧಿಗಾಗಿ 2025-26ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ  ಅರ್ಜಿ ಆಹ್ವಾನ


ಕೊಪ್ಪಳ , 4 ಜೂನ್ (ಹಿ.ಸ.)

ಆ್ಯಂಕರ್: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ವೀರಶೈವ ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ(ಪ್ರವರ್ಗ-|||ಬಿ) ಅಭಿವೃದ್ಧಿಗಾಗಿ 2025-26ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ನಿಗಮದಿಂದ ಶೈಕ್ಷಣಿಕ ಸಾಲ ಯೋಜನೆ(ಬಸವ ಬೆಳಗು ಯೋಜನೆ (ಹೊಸ ವಿದ್ಯಾರ್ಥಿಗಳು ಮತ್ತು ನವೀಕರಣ), ವಿದೇಶ ವಿದ್ಯಾವಿಕಾಸ ಯೋಜನೆ), ಜೀವಜಲ ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ http://www.kaushalkar.com , ಸ್ವ ಸಹಾಯ ಸಂಘಗಳಿಗೆ ಉತ್ತೇಜನ ಯೋಜನೆಯಲ್ಲಿ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಜೂನ್ 30 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.

ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡಿನಲ್ಲಿರುವಂತೆ ಹೆಸರು(ಶ್ರೀ/ಶ್ರೀಮತಿ/ಕುಮಾರಿ ಮುಂತಾದ ಮಾಹಿತಿಯನ್ನು ಒಳಗೊಂಡಂತೆ) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‍ಪುಸ್ತಕದಲ್ಲಿ ಹೊಂದಾಣಿಕೆಯಾಗಬೇಕು.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ನಿಗಮದ ವೆಬ್‍ಸೈಟ್ https://kvldcl.karnataka.gov.in ಗೆ ಭೇಟಿ ನೀಡಿ ಅರ್ಹತೆ, ಮಾನದಂಡಗಳ ಕುರಿತು ಹೆಚ್ಚಿನ ಮಾಹಿತಿ ಪಡೆಯಬಹುದು ಅಥವಾ ನಿಗಮದ ಸಹಾಯವಾಣಿ ಸಂ: 080-22865522 ಮತ್ತು 9900012351, 9900012352 ಆಯಾ ಜಿಲ್ಲಾ ಕಚೇರಿಯ ದೂ.ಸಂ. 08539-221847 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande