ಪರಿಶಿಷ್ಟ ನೌಕರರ ರಕ್ಷಣೆಗೆ ಜಿಲ್ಲಾಧ್ಯಕ್ಷ ಅಜಯ್ ಕುಮಾರ್ ಭರವಸೆ
ಪರಿಶಿಷ್ಟ ನೌಕರರ ರಕ್ಷಣೆಗೆ ಜಿಲ್ಲಾಧ್ಯಕ್ಷ ಅಜಯ್ ಕುಮಾರ್ ಭರವಸೆ
ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಸಮಯನ್ವಯ ಸಮಿತಿಯ ಪದಾಧಿಕಾರಿಗಳು ಕೋಲಾರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಜಯ್ ರವರನ್ನು ಸನ್ಮಾನಿಸಿದರು.


ಕೋಲಾರ ಜೂನ್ ೪ (ಹಿ.ಸ) ಆಂಕರ್ :

ಆ್ಯಂಕರ್ : ನಾನಾ ಇಲಾಖೆಗಳಲ್ಲಿ ಪರಿಶಿಷ್ಟರಿಗೆ ಆಗುತ್ತಿರುವ ಸಮಸ್ಯೆಗಳಿಗೆ ಸಂಧಿಸುವತ್ತ ನೌಕರರ ಮಂಖAಡರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸರ್ಕಾರಿ ನೌಕರರ ಹಿತರಕ್ಷಣೆಗೆ ಬದ್ದರಾಗಿರುವುದಾಗಿ ಕರ್ನಾಟಕ ರಾಜ್ಯ ಸಾರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಎ ಅಜಯ್ ಕುಮಾರ್ ತಿಳಿಸಿದರು.

ತಮ್ಮ ಕಾರ್ಯಾಲಯಲ್ಲಿ ನೂತನವಾಗಿ ಸರ್ಕಾರಿ ನೌಕರರ ಎಸ್ಸಿ/ಎಸ್ಟಿ ಸಮನ್ವಯ ಸಮಿತಿ ಕೋಲಾರ ಜಿಲ್ಲಾದ್ಯಕ್ಷರಾದ ಎನ್ ಮುನಿರಾಜು ರವರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಸರ್ಕಾರಿ ನೌಕರರು ತಮ್ಮ ಬಳಿಗೆ ಬರುವ ಸಾರ್ವಜನಿಕರ ಸೇವೆಗೆ ಕ೦ಕಣ ಬದ್ದರಾಗಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿರವುದು ಶ್ಲಾಘನೀಯ ಸಂಗತಿ ಎ0ದರು.

ಜಿಲ್ಲಾದ್ಯಕ್ಷ ಮುನಿರಾಜು ಮಾತನಾಡಿ ಜಿಲ್ಲೆಯಾದ್ಯಂತ ಇರುವ ಎಸ್ಸಿ/ಎಸ್ಟಿ ನೌಕರರನ್ನು ಸಂಘಟಿಸಿ ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು.

ಈ ಸಂಧರ್ಭದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯರಾದ ಶ್ರೀನಿವಾಸ ರೆಡ್ಡಿ ಕೋಶಾಧ್ಯಕ್ಷರಾದ ವಿ.ಮುರಳಿ ಮೋಹನ್, ಎಂ ರೇಣುಕ ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್. ಮುಕುಂದ ಮತ್ತಿತರರು ಉಪಸ್ಥಿತರಿದ್ದರು.

ಚಿತ್ರ : ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಸಮಯನ್ವಯ ಸಮಿತಿಯ ಪದಾಧಿಕಾರಿಗಳು ಕೋಲಾರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಜಯ್ ರವರನ್ನು ಸನ್ಮಾನಿಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande