ನಾಳೆ ಪ್ಲಾಸ್ಟಿಕ್ ಮುಕ್ತ ರಾಯಚೂರು ಅಭಿಯಾನ
ರಾಯಚೂರು , 4 ಜೂನ್ (ಹಿ.ಸ.) ಆ್ಯಂಕರ್: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಗ್ರೀನ್ ರಾಯಚೂರು, ಪ್ರಜಾತೀತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ಮತ್ತು ಅರಣ್ಯ ಇಲಾಖೆ, ಪೆÇಲೀಸ್ ಇಲಾಖೆ, ಮಹಾನಗರ ಪಾಲಿಕೆ ರಾಯಚೂರ ಇವರ ಸಂಯುಕ್ತಾಶ್ರಯದಲ್ಲಿ ಜೂನ್ 05ರ ಬೆಳಿಗ್ಗೆ 8.30ಕ್ಕೆ
ನಾಳೆ ಪ್ಲಾಸ್ಟಿಕ್ ಮುಕ್ತ ರಾಯಚೂರು ಅಭಿಯಾನ


ರಾಯಚೂರು , 4 ಜೂನ್ (ಹಿ.ಸ.)

ಆ್ಯಂಕರ್: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಗ್ರೀನ್ ರಾಯಚೂರು, ಪ್ರಜಾತೀತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ಮತ್ತು ಅರಣ್ಯ ಇಲಾಖೆ, ಪೆÇಲೀಸ್ ಇಲಾಖೆ, ಮಹಾನಗರ ಪಾಲಿಕೆ ರಾಯಚೂರ ಇವರ ಸಂಯುಕ್ತಾಶ್ರಯದಲ್ಲಿ ಜೂನ್ 05ರ ಬೆಳಿಗ್ಗೆ 8.30ಕ್ಕೆ ನಗರದ ಸದರ್ ಬಜಾರ್ ಪೆÇಲೀಸ್ ಠಾಣೆ ಆವರಣದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಪ್ಲಾಸ್ಟಿಕ್ ಮುಕ್ತ ರಾಯಚೂರು ಅಭಿಯಾನ ಹಮ್ಮಿಕೊಳ್ಳಲಾಗಿದೆ. ಗೌರವಾನ್ವಿತ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಹಾವರಕರ್ ಗುಲ್ಜರಲಾಲ್ ಅವರು ಕಾರ್ಯಕ್ರಮ ಉದ್ಘಾಟಿಸುವರು.

ಅಧ್ಯಕ್ಷತೆಯನ್ನು ಸದರ್ ಬಜಾರ್ ಪೆÇಲೀಸ್ ಠಾಣೆಯ ವೃತ್ತ ನೀರಿಕ್ಷಕರಾದ ಉಮೇಶ ಕಾಂಬ್ಳೆ ಅವರು ವಹಿಸುವವರು.

ಮುಖ್ಯಅತಿಥಿಗಳಾಗಿ ಗೌರವಾನ್ವಿತ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಎ.ಸಾತ್ವಿಕ್., ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬೀನ್ ಮಹಾಪಾತ್ರ., ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ್, ಪ್ರಜಾತೀತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ರಾಜ ಯೋಗಿನಿ ಸ್ಮಿತಾ ಅಕ್ಕನವರು, ಗ್ರೀನ್ ರಾಯಚೂರು ಸಂಸ್ಥೆಯ ಅಧ್ಯಕ್ಷರಾದ ಕು.ಸರಸ್ವತಿ ಕಿಲಕಿಲೇ, ರಾಯಚೂರ ವಲಯ ಅರಣ್ಯ ಅಧಿಕಾರಿ ರಾಜೇಶ ನಾಯಕ್ ಅವರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande