ನವದೆಹಲಿ, 04 ಜೂನ್ (ಹಿ.ಸ.) :
ಆ್ಯಂಕರ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೇಳಿಕೆಗೆ ಬಿಜೆಪಿಯು ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು, ಅದು ಭಾರತೀಯ ಸೇನೆಯ ಶೌರ್ಯಕ್ಕೆ ಮಾಡಿದ ಅವಮಾನ ಎಂದು ಹೇಳಿದರು.
ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಹುಲ್ ಗಾಂಧಿಯು ಆಪರೇಷನ್ ಸಿಂಧೂರ್ ಯಶಸ್ಸನ್ನು ಶರಣಾಗತಿಯಂತೆ ಚಿತ್ರಿಸಿರುವುದು ಅಪಾಯಕಾರಿಯ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದರು.
ಅವರು ಮಾತುಗಳಿಂದ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ತಕ್ಕ ಪ್ರಬುದ್ಧತೆ ಇಲ್ಲ ಎಂಬುದನ್ನು ಜಗತ್ತಿಗೆ ತೋರಿಸುತ್ತಿದ್ದಾರೆ ಎಂದು ಟೀಕಿಸಿದರು.
ಶರಣಾಗತಿ ಎಂಬ ಪದವನ್ನು ಪಾಕಿಸ್ತಾನ ಸಹ ಬಳಸಿಲ್ಲ, ರಾಹುಲ್ ಗಾಂಧಿಯ ಮಾತುಗಳು ಸೇನೆಯ ಶೌರ್ಯ ಹಾಗೂ ತ್ಯಾಗಕ್ಕೆ ನಿರ್ಲಕ್ಷ್ಯವೆಂದೂ, ಸೇನೆಯು ಪ್ರಕ್ರಿಯೆ ಯಶಸ್ವಿಯಾಗಿ ಮುಗಿಸಿದೆ ಎಂದು ಹೇಳಿದೆ, ಬಿಜೆಪಿಯು ಅಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa