ರಾಯಚೂರು , 4 ಜೂನ್ (ಹಿ.ಸ.)
ಆ್ಯಂಕರ್: ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗ-01ರ 33/11 ಕೆವಿ ಮಾರ್ಗ ದುರಸ್ತಿ ಕಾಮಗಾರಿ ನಿರ್ವಹಣಾ ಕಾರ್ಯ ಹಮ್ಮಿಕೊಂಡ ಪ್ರಯುಕ್ತ ಜೂನ್;05ರ ಬೆಳ್ಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ತಿಳಿಸಲಾಗಿದೆ.
ಅಂದು ಬೆಳಿಗ್ಗೆ ಕೃಷಿ ವಿಶ್ವವಿದ್ಯಾಲಯ, ಅಸ್ಕಾಹಳ, ಕೃಷ್ಣ ಮೇಡೌಸ್, ಬೈಪಾಸ್ ರೋಡ್, ಅಮರಾವತಿ ಕಾಲೋನಿ, ಹೊಸ ಡಿಸಿ ಆಫೀಸ್ ಸೇರಿದಂತೆ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08532-226386, 08532-231999ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗ-01ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್