ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ : ಕಂಬನಿ ಮಿಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ, 4 ಜೂನ್ (ಹಿ.ಸ.): ಆ್ಯಂಕರ್: ಚೊಚ್ಚಲ ಬಾರಿಗೆ ಐಪಿಎಲ್ ಟ್ರೋಫಿ ಜಯಿಸಿ ಬೆಂಗಳೂರಿಗೆ ಆಗಮಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ‌ಕಾಲ್ತುಳಿತದಿಂದಾಗಿ 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರ
Hebalkar


ಬೆಳಗಾವಿ, 4 ಜೂನ್ (ಹಿ.ಸ.):

ಆ್ಯಂಕರ್:

ಚೊಚ್ಚಲ ಬಾರಿಗೆ ಐಪಿಎಲ್ ಟ್ರೋಫಿ ಜಯಿಸಿ ಬೆಂಗಳೂರಿಗೆ ಆಗಮಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ‌ಕಾಲ್ತುಳಿತದಿಂದಾಗಿ 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಂಬನಿ ಮಿಡಿದಿದ್ದಾರೆ.

ಆರ್‌.ಸಿ.ಬಿ ತಂಡದ ಗೆಲುವಿನ ಸಂಭ್ರಮಾಚರಣೆಯ ವೇಳೆ ಸಾವು, ನೋವುಗಳಾಗಿರುವ ಸುದ್ದಿ ತಿಳಿದು, ಮನಸ್ಸಿಗೆ ಅತೀವ ನೋವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಗಳಿಗೆ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಆ ದೇವರು ನೀಡಲಿ. ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಸಚಿವರು ಪ್ರಾರ್ಥಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande