ಗದಗ, 05 ಜೂನ್ (ಹಿ.ಸ.) :
ಆ್ಯಂಕರ್ : ಜೂನ್ ಮಾಹೆಯ ಮೊದಲನೇ ವಾರಾಂತ್ಯದಲ್ಲಿ ಜೂನ್ 6 ರಂದು ಶುಕ್ರವಾರ ಹಾಗೂ 7 ರಂದು ಶನಿವಾರ ಬಕ್ರೀದ ಹಬ್ಬ ಇರುವ ಕಾರಣ ಜೂನ್ 6 ರಿಂದ 8 ರವರೆಗೆ ಮದುವೆ/ಇತರೆ ಸಮಾರಂಭಗಳು, ವಿವಿಧ ಸ್ಥಳಗಳಿಗೆ ಹಾಗೂ ಪ್ರವಾಸಿ ತಾಣಗಳಿಗೆ ಹೋಗಲು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ಪ್ರಯಾಣಿಕರು ಬಸ್ ನಿಲ್ದಾಣಕ್ಕೆ ಆಗಮಿಸುವ ನಿರೀಕ್ಷೆ ಇರುವುದರಿಂದ ಸೂಕ್ತ ಸಾರಿಗೆ ವ್ಯವಸ್ಥೆಯನ್ನು ಒದಗಿಸಬೇಕಾಗಿರುತ್ತದೆ.
ವಾ.ಕ.ರ.ಸಾ.ಸಂಸ್ಥೆಯ ವ್ಯಾಪ್ತಿಯ ವಿವಿಧ ವಿಭಾಗಗಳಿಂದ ಸುಮಾರು 130 ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ. ಹಾವೇರಿ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಹಾಗೂ ಶಿರಸಿ ಸ್ಥಳಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ಪ್ರಯಾಣಿಕರು ಪ್ರಯಾಣಿಸುವ ನಿರೀಕ್ಷೆ ಇರುವುದರಿಂದ ವಾರಾಂತ್ಯದ ದಿನಗಳಲ್ಲಿ ಜೂನ್ 6 ಮತ್ತು ಜೂನ್ 7 ರಂದು ಬೆಂಗಳೂರಿನಿಂದ ನಾನಾ ಸ್ಥಳಗಳಿಗೆ ತೆರಳಲು ವಿಶೇಷ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ.
ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡಿಸಿಕೊಳ್ಳುವದರೊಂದಿಗೆ, ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕಾಗಿ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Lalita MP