ಕಾಲ್ತುಳಿತ ಪ್ರಕರಣ : ಜಿಲ್ಲಾಧಿಕಾರಿ ತನಿಖೆ ಆರಂಭ
ಬೆಂಗಳೂರು, 05 ಜೂನ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಿಂದ ಉಂಟಾದ 11 ಮಂದಿ ಆರ್ ಸಿಬಿ ಅಭಿಮಾನಿಗಳ ಸಾವು ಪ್ರಕರಣ ಸಂಬಂಧ ತನಿಖೆ ಕೈಗೊಂಡಿರುವ ಜಿಲ್ಲಾಧಿಕಾರಿ ಜೆ.ಜಗದೀಶ್ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕ್ರೀಡಾಂಗಣದಲ್ಲಿರುವ ಎಲ್ಲಾ
Enquiry start


ಬೆಂಗಳೂರು, 05 ಜೂನ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಿಂದ ಉಂಟಾದ 11 ಮಂದಿ ಆರ್ ಸಿಬಿ ಅಭಿಮಾನಿಗಳ ಸಾವು ಪ್ರಕರಣ ಸಂಬಂಧ ತನಿಖೆ ಕೈಗೊಂಡಿರುವ ಜಿಲ್ಲಾಧಿಕಾರಿ ಜೆ.ಜಗದೀಶ್ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕ್ರೀಡಾಂಗಣದಲ್ಲಿರುವ ಎಲ್ಲಾ ಪ್ರವೇಶ ದ್ವಾರಗಳನ್ನು ಪರಿಶೀಲನೆ ನಡೆಸಿ ಕಬ್ಬನ್ ಪಾರ್ಕ್ ಪೊಲೀಸರಿಂದ ಮಾಹಿತಿ ಪಡೆದುಕೊಂಡರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಜಗದೀಶ್, ದುರಂತದ ಬಗ್ಗೆ ತನಿಖೆ ನಡೆಸಿ 15 ದಿನದೊಳಗೆ ವರದಿ ನೀಡುವಂತೆ ಸರ್ಕಾರ ಆದೇಶಿಸಿದೆ‌. ಇಂದಿನಿಂದಲೇ ಕಾರ್ಯನಿರತರಾಗಿದ್ದೇನೆ. ಕಾಲ್ತುಳಿತ ಉಂಟಾಗಿರುವ ಸ್ಥಳದ ಬಗ್ಗೆ ತಪಾಸಣೆ ನಡೆಸಲಾಗಿದೆ. ಘಟನೆ ಕುರಿತು ಸಿಸಿಟಿವಿ ದೃಶ್ಯಾವಳಿ ಪಡೆದು ಪರಿಶೀಲಿಸಲಾಗುವುದು ಎಂದರು.

ದುರಂತದಲ್ಲಿ ಮೃತಪಟ್ಟಿರುವ ಕುಟುಂಬಸ್ಥರ ಹಾಗೂ ಗಾಯಾಳುಗಳಿಗೆ ನೋಟಿಸ್ ನೀಡಿ ಅವರಿಂದ ಹೇಳಿಕೆ ಪಡೆಯಲಾಗುವುದು. ಇದೇ 13ರಂದು ಬೆಳಗ್ಗೆ 10.30 ರಿಂದ 1.30ರವರೆಗೆ ಸಾರ್ವಜನಿಕರೂ ಸಹ ಬಂದು ತಮ್ಮ ಹೇಳಿಕೆ ನೀಡಲು ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದರು. ಘಟನೆ ಕುರಿತು ನಗರ ಪೋಲಿಸ್ ಇಲಾಖೆ,ಕೆಎಸ್ ಸಿಎ, ಬಿಎಂಆರ್​​ಸಿಎಲ್ ಅಧಿಕಾರಿಗಳಿಂದಲೂ ಮಾಹಿತಿ ಪಡೆದು ೧೫ ದಿನಗಳಲ್ಲಿ ಸರಕಾರಕ್ಕೆ ವರದಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande