ಕೊಪ್ಪಳ, 05 ಜೂನ್ (ಹಿ.ಸ.) :
ಆ್ಯಂಕರ್ : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗುರುವಾರ ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಚಿಗುರು ಸಂಭ್ರಮ 2025 ಕಾರ್ಯಕ್ರಮ ನಡೆಯಿತು.
ಕೊಪ್ಪಳ ಕಿಮ್ಸ್ ನಿರ್ದೇಶಕರಾದ ಡಾ. ವಿಜಯನಾಥ ಇಟಗಿ ಅವರು ಸಸಿಗಳಿಗೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು
.
ನಂತರ ಸಂಸ್ಥೆಯ ಆವರಣದಲ್ಲಿ ನಿರ್ದೇಶಕರು, ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಂದ ಸಸಿಗಳನ್ನು ನೆಡಲಾಯಿತು. ವಿದ್ಯಾರ್ಥಿಗಳು ರಚಿಸಿದ ಪರಿಸರ ಕಾಳಜಿಯ ಬಗೆಗಿನ ಪೆÇೀಸ್ಟರ್ಗಳನ್ನು ಪ್ರದರ್ಶಿಸಲಾಯಿತು. ಮತ್ತು ವಿದ್ಯಾರ್ಥಿಗಳಿಗಾಗಿ ಘೋಷಣೆಗಳನ್ನು ಹಾಗೂ ಪರಿಸರದ ಬಗ್ಗೆ ಕ್ವಿಜ್ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್