ನವದೆಹಲಿ, 05 ಜೂನ್ (ಹಿ.ಸ.) :
ಆ್ಯಂಕರ್ : ವಿಶ್ವ ಪರಿಸರ ದಿನದ ಅಂಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಪರಿಸರ ಸಂರಕ್ಷಣೆಯ ತುರ್ತು ಅಗತ್ಯದ ಬಗ್ಗೆ ಜಾಗೃತಿ ಮೂಡಿಸುವ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.
“ನಮ್ಮ ಗ್ರಹವನ್ನು ರಕ್ಷಿಸಲು ಮತ್ತು ಸುಸ್ಥಿರ ಜೀವನಶೈಲಿಗೆ ಉತ್ತೇಜನ ನೀಡಲು ನಾವು ಒಟ್ಟಾಗಿ ಸೇರುವುದು ಅಗತ್ಯ ಎಂದಿರುವ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಯ ನಾಯಕತ್ವವನ್ನು ಪ್ರಶಂಸಿಸಿ, “ಪರಿಸರ ನಾಶವನ್ನು ನಿಭಾಯಿಸಲು ಸರ್ಕಾರ ಪೂರ್ವಭಾವಿ ಕ್ರಮಗಳನ್ನು ಕೈಗೊಂಡಿದೆ” ಎಂದು ತಿಳಿಸಿದ್ದಾರೆ.
ಸ್ವಚ್ಛ ಭಾರತ ಅಭಿಯಾನ, ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ, ನಮಾಮಿ ಗಂಗೆ ಮತ್ತು ‘ಏಕ್ ಪೆಡ್ ಮಾ ಕೆ ನಾಮ್’ ಮುಂತಾದ ಯೋಜನೆಗಳು ಹಸಿರು ಮತ್ತು ಸ್ವಚ್ಛ ಭಾರತದ ಸಂಕಲ್ಪದ ಭಾಗವೆಂದು ನಡ್ಡಾ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa