ಬೆಂಗಳೂರು, 05 ಜೂನ್ (ಹಿ.ಸ.) :
ಆ್ಯಂಕರ್ : ಆರ್ ಸಿಬಿ ಕ್ರಿಕೆಟ್ ತಂಡದ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತ ಘಟನೆ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಗೃಹ ಸಚಿವ ಜಿ.ಪರಮೇಶ್ವರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗೃಹ ಸಚಿವರ ಭೇಟಿ ವೇಳೆ ಬೆಂಗಳೂರು ನಗರ ಪೋಲಿಸ್ ಆಯುಕ್ತ ಬಿ.ದಯಾನಂದ ಸೇರಿದಂತೆ ಹಿರಿಯ ಅಧಿಕಾರಿಗಳು ಸಚಿವರಿಗೆ ಘಟನೆ ಕುರಿತು ಮಾಹಿತಿ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa