ಕ್ಷಮೆ ಕೇಳಿ, ಜಂಟಿ ಅಧಿವೇಶನ ನಡೆಸಿ, ಸಿಬಿಐ ತನಿಖೆಗೆ ಒಪ್ಪಿಸಿ-ಬಿ. ಶ್ರೀರಾಮುಲು
ಬಳ್ಳಾರಿ, 06 ಜೂನ್ (ಹಿ.ಸ.) : ಆ್ಯಂಕರ್ : ಹನ್ನೊಂದು ಜನರ ಸಾವಿನ ದುರ್ಘಟನೆಯ ಹಿನ್ನಲೆಯಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಸಾರ್ವಜನಿಕರ ಕ್ಷಮೆ ಕೇಳಿ ಮೂರು ದಿನಗಳ ತುರ್ತು ಜಂಟಿ ಅಧಿವೇಶವನ್ನು ನಡೆಸಿ ಸತ್ಯಾಂಶಗಳನ್ನು ಜನರಿಗೆ ತಿಳಿಸಿ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಬಿಜೆ
ಜನರಲ್ಲಿ ಕ್ಷಮೆ ಕೇಳಿ, ಜಂಟಿ ಅಧಿವೇಶನ ನಡೆಸಿ, ಸಿಬಿಐ ತನಿಖೆಗೆ ಒಪ್ಪಿಸಿ ; ಬಿ. ಶ್ರೀರಾಮುಲು


ಜನರಲ್ಲಿ ಕ್ಷಮೆ ಕೇಳಿ, ಜಂಟಿ ಅಧಿವೇಶನ ನಡೆಸಿ, ಸಿಬಿಐ ತನಿಖೆಗೆ ಒಪ್ಪಿಸಿ ; ಬಿ. ಶ್ರೀರಾಮುಲು


ಬಳ್ಳಾರಿ, 06 ಜೂನ್ (ಹಿ.ಸ.) :

ಆ್ಯಂಕರ್ : ಹನ್ನೊಂದು ಜನರ ಸಾವಿನ ದುರ್ಘಟನೆಯ ಹಿನ್ನಲೆಯಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಸಾರ್ವಜನಿಕರ ಕ್ಷಮೆ ಕೇಳಿ ಮೂರು ದಿನಗಳ ತುರ್ತು ಜಂಟಿ ಅಧಿವೇಶವನ್ನು ನಡೆಸಿ ಸತ್ಯಾಂಶಗಳನ್ನು ಜನರಿಗೆ ತಿಳಿಸಿ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಬಿಜೆಪಿ ಮುಖಂಡ ಬಿ. ಶ್ರೀರಾಮುಲು ಅವರು ಆಗ್ರಹಿಸಿದ್ದಾರೆ.

ಗೃಹ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ ಅವರು, ಆರ್‍ಸಿಬಿ ಐಪಿಎಲ್ ತಂಡ ಕ್ರಿಕೆಟ್ ಕಪ್ ಗೆದ್ದ ನಂತರದ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಂತರ ನಡೆದಿರುವ ಎಲ್ಲಾ ಘಟನೆಗಳು ಅಮಾನವೀಯ. ಮೃತ 11 ಜನರೂ ಕುಟುಂಬದ ಆಧಾರವಾಗಿದ್ದವರು. ಸಂತ್ರಸ್ತರ ಕುಟುಂಬಕ್ಕೆ ಸರ್ಕಾರ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಪೊಲೀಸ್ ಅಧಿಕಾರಿಗಳ ಅಮಾನತ್ತು ಮಾಡಿರುವುದು ತಪ್ಪು. ಈ ಮೂವರು ನೈತಿಕ ಹೊಣೆ ಹೊತ್ತು ತಕ್ಷಣವೇ ರಾಜೀನಾಮೆ ನೀಡಬೇಕು. ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‍ನ `ತುಘಲಕ್’ ಆಡಳಿತ ಕೊನೆಗೊಳ್ಳಬೇಕು. ಪೊಲೀಸರು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಗೃಹ ಸಚಿವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಬೇಕು. ಅಲ್ಲದೇ, ಸರ್ಕಾರವೇ ಇಡೀ ಘಟನೆಯನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

ಸಂಭ್ರಮಾಚರಣೆಯಲ್ಲಿ ರಾಜ್ಯಪಾಲರನ್ನೂ ಅವಮಾನಿಸಲಾಗಿದೆ. ತೆಲಂಗಾಣದಲ್ಲಿ ಪುಷ್ಪ ಚಿತ್ರ ವೀಕ್ಷಣೆಗೆ ಚಿತ್ರದ ನಾಯಕ ನಟ ಭೇಟಿ ನೀಡಿದಾಗ ಉಂಟಾದ ಕಾಲ್ತುಳಿತದಲ್ಲಿ ಮೃತಪಟ್ಟ ಘಟನೆಯ ಹಿನ್ನಲೆಯಲ್ಲಿ ಚಿತ್ರನಟನನ್ನೇ ಬಂಧಿಸಲಾಯಿತು. ಕರ್ನಾಟಕದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಗೃಹ ಸಚಿವರ ಮೇಲೆ ಏತಕ್ಕಾಗಿ ಅರೆಸ್ಟ್ ವಾರೆಂಟ್ ಜಾರಿ ಮಾಡಬಾರದು? ಎಂದು ಪ್ರಶ್ನಿಸಿದರು.

ಈ ಸಂದರ್ಭದಲ್ಲಿ ಬಿಜೆಪಿಯ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande