ಧಾರವಾಡ, 07 ಜೂನ್ (ಹಿ.ಸ.) :
ಆ್ಯಂಕರ್ : ಧಾರವಾಡ ತೋಟಗಾರಿಕೆ ಇಲಾಖೆ ಹಾಗೂ ಪ್ರಾದೇಶಿಕ ತೋಟಗಾರಿಕೆ ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರ (ಕುಂಭಾಪುರ ಫಾರ್ಮ) ಇವರ ಸಹಯೋಗದೊಂದಿಗೆ ಮಾವು ಬೆಳೆಯ ಬಗ್ಗೆ ಈ ವರ್ಷದ ಮೊದಲನೇ ತರಬೇತಿ ಕಾರ್ಯಕ್ರಮವನ್ನು ಜೂನ್ 16, 2025 ರಂದು ಹಮ್ಮಿಕೊಳ್ಳಲಾಗಿದೆ.
ಮಾವಿನಲ್ಲಿ ಜೂನ್ ನಿಂದ ಡಿಸೆಂಬರ್ ತಿಂಗಳವರೆಗೆ ಅನುಸರಿಸಬೇಕಾದ ವೈಜ್ಞಾನಿಕ ಪದ್ಧತಿಗಳ ಬಗ್ಗೆ ತರಬೇತಿಯನ್ನು ನೀಡಲಾಗುತ್ತದೆ. ವಿಶೇಷವಾಗಿ ಮಾವಿನಲ್ಲಿ ಸರಿಯಾದ ಸಮಯಕ್ಕೆ ಹೆಚ್ಚಿನ ಹಾಗೂ ಗುಣಮಟ್ಟದ ಇಳುವರಿ ಪಡೆಯಲು ತರಬೇತಿ ನೀಡಲಾಗುತ್ತದೆ.
ಆಸಕ್ತ ರೈತರು ಜೂನ್ 12, 2025 ರೊಳಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯಲ್ಲಿ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಪ್ರಾ.ತೋ.ಸಂ.ವಿ. ಕೇಂದ್ರದ ವಿಸ್ತರಣಾ ಮುಂದಾಳು ಡಾ. ಪಲ್ಲವಿ ಜಿ. ಅವರ ಮೊಬೈಲ್ ಸಂ: 7892770955 ಗೆ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa