ಕಲಬುರಗಿ, 07 ಜೂನ್ (ಹಿ.ಸ.) :
ಆ್ಯಂಕರ್ : ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಬಿಸಿಲೂರು ಕಲಬುರಗಿ ಜಿಲ್ಲೆಯಲ್ಲಿ ಮುಸ್ಲಿಂ ಬಾಂಧವರು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಿದರು.
ನಗರದ ಹೊರವಲಯದ ಸೇಡಂ ರಸ್ತೆಯಲ್ಲಿರುವ ಖದೀಮ್ ಈದ್ಗಾ ಮೈದಾನ ಸೇರಿದಂತೆ ಈದ್ಗಾ ಮೈದಾನಗಳಲ್ಲಿ ಬಕ್ರೀದ್ ಹಬ್ಬದ ನಿಮಿತ್ತ ಬೆಳಿಗ್ಗೆ 6 ಗಂಟೆಯಿಂದಲ್ಲೆ ವಿಶೇಷ ನಮಾಜ್ ಮತ್ತು ಇಮಾಮಗಳಿಂದ ವಿಶೇಷ ಉಪನ್ಯಾಸದ ಮೂಲಕ ದೇಶದ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಹಲವು ಮುಸ್ಲಿಂ ಸಮುದಾಯದ ಮುಖಂಡರು, ಬಕ್ರೀದ್ ಹಬ್ಬವು ತ್ಯಾಗ ಬಲಿದಾನದ ಸಂಕೇತವಾಗಿದ್ದು, ದೇಶದಾದ್ಯಂತ ಸೌಹಾರ್ದದತೆಯಿಂದ ಆಚರಣೆ ಮಾಡಲಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಹಿಂದೂಸ್ತಾನ್ ಸಮಾಚಾರ್ / Samarth biral