ಮೈಸೂರು, 7 ಜೂನ್ (ಹಿ.ಸ.):
ಆ್ಯಂಕರ್:
ಆರ್ಸಿಬಿ ಸಂಭ್ರಮಾಚರಣೆ ದುರಂತದಲ್ಲಿ 11 ಜನರ ಸಾವಿನ ಬಗ್ಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಹಾಗೂ ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಆಗ್ರಹಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಆರ್ಸಿಬಿ ಸಂಭ್ರಮಾಚರಣೆ ದುರಂತದಲ್ಲಿ 11 ಮಂದಿ ಸಾವಿಗೆ ಇವರೇ ನೇರ ಹೊಣೆ. ನಿಮ್ಮ ಕೈಯಲ್ಲಿ 11 ಜನರ ಸಾವಿನ ರಕ್ತವಿದೆ. ಇದೊಂದು ಖಾಸಗಿ ಕಾರ್ಯಕ್ರಮವಲ್ಲ. ಇದೊಂದು ಕೆಳ ಮಟ್ಟದ ಗಿಮಿಕ್ ಕಾರ್ಯಕ್ರಮದಲ್ಲಿ ಅವರ ಮಕ್ಕಳು, ಮೊಮ್ಮಕ್ಕಳಿಗೆ ವೇದಿಕೆ ಕಲ್ಪಿಸಿಕೊಟ್ಟಿದ್ದಾರೆ ಎಂದು ಕಿಡಿಕಾರಿದರು.
ಆರ್ಸಿಬಿ ಹೆಸರಿನಲ್ಲಿ ಕನ್ನಡಿಗರು ಇರುವುದು ಇಬ್ಬರೇ ಆದರೂ ಕನ್ನಡಿಗರ ಭಾವನೆ ಹೆಚ್ಚಾಗಿದೆ. ಆರ್ಸಿಬಿ ಟೀಂ ಹೈಜಾಕ್ ಮಾಡಿಕೊಳ್ಳಲು ಸರ್ಕಾರ ಯತ್ನಿಸಿದೆ. ಡಿಪಿಆರ್ ಅನುಮತಿ ಪಡೆಯದೇ ಕಾರ್ಯಕ್ರಮ ನಡೆಸಿದ್ದಾರೆ. ಇದು ಬೆಟ್ಟಿಂಗ್ನಿಂದ ಗೆದ್ದು ಬಂದಿದ್ದಾರಾ ಎಂಬ ಅನುಮಾನ ಮೂಡುತ್ತದೆ. ಇವರೇನು ಹಣ ಹೂಡಿದ್ದರಾ ಎಂದು ಪ್ರಶ್ನಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa