ಧಾರವಾಡ, 07 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಸಾಹಿತ್ಯ ಅಕಾಡೆಮಿಯು 2024 ನೇ ವರ್ಷದಲ್ಲಿ ಪುಸ್ತಕ ಬಹುಮಾನ ಯೋಜನೆಗಾಗಿ ವಿವಿಧ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ಲೇಖಕರು, ಪ್ರಕಾಶಕರು, ಸಾಹಿತ್ಯಾಸಕ್ತರು ನಾಲ್ಕು ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ವಿಳಾಸಕ್ಕೆ ರಿಜಿಸ್ಟರ್ಡ್ ಅಂಚೆ, ಕೊರಿಯರ್ ಮೂಲಕ ಅಥವಾ ಖುದ್ದಾಗಿ ಜುಲೈ 15, 2025 ರೊಳಗೆ ತಲುಪವಂತೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್ಸೈಟ್ www.sahithyaacademy.karanata.gov.in ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa