ಕಾಂಗ್ರೆಸ್‌ ನಾಯಕರ ಎಡವಟ್ಟಿನಿಂದ ಕಾಲ್ತುಳಿತ : ಬಿಜೆಪಿ
ಬೆಂಗಳೂರು, 07 ಜೂನ್ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್‌ ನಾಯಕರ ಎಡವಟ್ಟಿನಿಂದಾದ ಬೆಂಗಳೂರು ಕಾಲ್ತುಳಿತ ಪ್ರಕರಣವನ್ನು ಅಧಿಕಾರಿಗಳ, ಆಡಳಿತ ವ್ಯವಸ್ಥೆಯ ಮೇಲೆ ಹೊರಿಸಲು ಕಾಂಗ್ರೆಸ್ ಸರ್ಕಾರ ಯತ್ನಿಸುತ್ತಿದೆ. ಇಡೀ ಕಾರ್ಯಕ್ರಮದ ಉಸ್ತುವಾರಿ ಹೊತ್ತಿದ್ದ ಡಿ.ಕೆ.ಶಿವಕುಮಾರ್ ಅವರು ಈಗ ಯೂ-ಟರ್ನ್‌ ಹೊಡೆದು ನ
ಕಾಂಗ್ರೆಸ್‌ ನಾಯಕರ ಎಡವಟ್ಟಿನಿಂದ ಕಾಲ್ತುಳಿತ : ಬಿಜೆಪಿ


ಬೆಂಗಳೂರು, 07 ಜೂನ್ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್‌ ನಾಯಕರ ಎಡವಟ್ಟಿನಿಂದಾದ ಬೆಂಗಳೂರು ಕಾಲ್ತುಳಿತ ಪ್ರಕರಣವನ್ನು ಅಧಿಕಾರಿಗಳ, ಆಡಳಿತ ವ್ಯವಸ್ಥೆಯ ಮೇಲೆ ಹೊರಿಸಲು ಕಾಂಗ್ರೆಸ್ ಸರ್ಕಾರ ಯತ್ನಿಸುತ್ತಿದೆ. ಇಡೀ ಕಾರ್ಯಕ್ರಮದ ಉಸ್ತುವಾರಿ ಹೊತ್ತಿದ್ದ ಡಿ.ಕೆ.ಶಿವಕುಮಾರ್ ಅವರು ಈಗ ಯೂ-ಟರ್ನ್‌ ಹೊಡೆದು ನನ್ನದೇನು ತಪ್ಪಿಲ್ಲ ಎನ್ನುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕ ಆರೋಪಿಸಿದೆ.

ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ಯಾವುದೇ ವಿಘ್ನಗಳಿಲ್ಲದೆ ಸಂಪನ್ನವಾಗಿದ್ದರೆ ಅದರ ಕ್ರೆಡಿಟ್‌ ಹೊತ್ತುಕೊಳ್ಳಲು ಡಿಕೆಶಿ ಅವರು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದರು. ಅದಕ್ಕಾಗಿಯೇ ತಮ್ಮ ಪಿಆರ್‌ ತಂಡಕ್ಕೆ ವಿಶೇಷ ಸೂಚನೆ ನೀಡಿದ್ದರು. ಆದರೆ ದುರ್ಘಟನೆ ಸಂಭವಿಸಿ, 11 ಜನರು ಸಾವನ್ನಪ್ಪಿದ ಬಳಿಕ ಡಿಸಿಎಂ ಅವರು ಘಟನೆಯಿಂದ ಅಂತರ ಕಾಯ್ದುಕೊಂಡು ತಮ್ಮ ತಪ್ಪನ್ನು ಅಧಿಕಾರಿಗಳ ಮೇಲೆ, ಕ್ರಿಕೆಟ್‌ ಸಂಸ್ಥೆ, ಪ್ರಾಂಚೈಸಿಗಳ ಮೇಲೆ ಹೊರಿಸುತ್ತಿದ್ದಾರೆ.

ಅಧಿಕಾರಿಗಳು ಕರೆದರು ಹಾಗಾಗಿ ಹೋದೆ ಎನ್ನುವ ಡಿಕೆಶಿ ಅವರೇ, ಪೊಲೀಸ್‌ ಇಲಾಖೆ, ಗುಪ್ತಚರ ಇಲಾಖೆ ನೀಡಿದ್ದ ಎಚ್ಚರಿಕೆಯನ್ನು ಧಿಕ್ಕರಿಸಿ ಎರಡೆರಡು ಕಾರ್ಯಕ್ರಮವನ್ನು ಆಯೋಜಿಸಿದ್ದು ಏಕೆ?

ವಿಧಾನ ಸೌಧದ ಮೆಟ್ಟಿಲ ಬಳಿ ನಡೆದ ಕಾರ್ಯಕ್ರಮದ ವೇಳೆಯೇ ಕಾಲ್ತುಳಿತ ಆಗಿ ಜನ ಸಾಯುತ್ತಿದ್ದರೂ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಟಗಾರರನ್ನು ಕರೆದುಕೊಂಡು ಹೋಗಿ ಅಲ್ಲಿ ಕಪ್‌ಗೆ ಮುತ್ತಿಕ್ಕಿದ್ದು ಏಕೆ?

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಅನುಮತಿ ಇರಲಿಲ್ಲ, ಅದು ಖಾಸಗಿ ಕಾರ್ಯಕ್ರಮ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅನುಮತಿ ಇಲ್ಲದ ಕಾರ್ಯಕ್ರಮಕ್ಕೆ ರಾಜ್ಯದ ಉಪಮುಖ್ಯಮಂತ್ರಿಗಳು ಹೋಗಿದ್ದು ಏಕೆ? ಎಂದು ಬಿಜೆಪಿ ಪ್ರಶ್ನಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande