ವಿಷೇಶ ಪೂಜೆ ಮೂಲಕ ಬಿತ್ತನೆಗೆ ಚಾಲನೆ
ಕಲಬುರಗಿ, 07 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಮುಂಗಾರು ಆರಂಭವಾದ ಹಿನ್ನಲೆಯಲ್ಲಿ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಐನೊಳ್ಳಿ ಗ್ರಾಮದಲ್ಲಿ ರೈತರು ಮುಂಗಾರು ಬಿತ್ತನೆಗಾಗಿ ಭೂಮಿ ತಾಯಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಬಿತ್ತನೆಗೆ ಚಾಲನೆ ನೀಡಿದ್ದಾರೆ. ಚಿಂಚೋಳಿ ತಾಲೂಕಿನ ಐನೋಳ್ಳಿ ಗ್ರ
ವಿಷೇಶ ಪೂಜೆ ಮೂಲಕ ಬಿತ್ತನೆ ಆರಂಭಸಿದ ರೈತರು


ಕಲಬುರಗಿ, 07 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಮುಂಗಾರು ಆರಂಭವಾದ ಹಿನ್ನಲೆಯಲ್ಲಿ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಐನೊಳ್ಳಿ ಗ್ರಾಮದಲ್ಲಿ ರೈತರು ಮುಂಗಾರು ಬಿತ್ತನೆಗಾಗಿ ಭೂಮಿ ತಾಯಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಬಿತ್ತನೆಗೆ ಚಾಲನೆ ನೀಡಿದ್ದಾರೆ.

ಚಿಂಚೋಳಿ ತಾಲೂಕಿನ ಐನೋಳ್ಳಿ ಗ್ರಾಮದಲ್ಲಿ ಗ್ರಾಮ ದೇವತೆಯಾದ ಶ್ರೀ ಲಕ್ಷ್ಮಿದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ನೈವೇದ್ಯ ಅರ್ಪಿಸಿದರು.ಬಳಿಕ ಒಕ್ಕಲುತನದ ಸಲಕರಣೆಗಳಾದ ಕುಂಟಿ,ಕುರುಪಿ, ನೆಗಿಲು,ಎತ್ತು, ಬಂಡಿ, ಟ್ರ್ಯಾಕ್ಟರ್ ಸೇರಿದಂತೆಯೇ ವಿವಿಧ ವಸ್ತುಗಳಿಗೆ ವಿಶೇಷವಾಗಿ ಶೃಂಗರಿಸುವ ಮೂಲಕ ಎತ್ತಿನ‌ ಬಂಡಿಯಲ್ಲಿ ಇಟ್ಟು ಗ್ರಾಮದ ಬಸವೇಶ್ವರ ವೃತ್ತದಿಂದ ಲಕ್ಷ್ಮೀ ದೇವಸ್ಥಾನದವರೆಗೆ ಮೆರವಣಿಗೆ ನಡೆಸಿದ ಗ್ರಾಮಸ್ಥರು ಭೂಮಿ ತಾಯಿ ನಮಿಸಿ, ಜೈಕಾರ ಹಾಕಿ ಸಂಭ್ರಮಿಸಿ ಬಿತ್ತನೆಗೆ ನಾಂದಿ ಹಾಡಿದರು.

ರೈತರ ಜೀವನಾಡಿಯಾಗಿರುವ ಎತ್ತುಗಳಿಗೆ ವಿಶೇಷವಾಗಿ ಶೃಂಗರಿಸಿ ಗ್ರಾಮದಲ್ಲಿ ಮೆರವಣಿಗೆ ನಡೆಸಿದರು.

ಹಿಂದೂಸ್ತಾನ್ ಸಮಾಚಾರ್ / Samarth biral


 rajesh pande