ಬೆಂಗಳೂರು, 07 ಜೂನ್ (ಹಿ.ಸ.) :
ಆ್ಯಂಕರ್ : ದೇಶದಲ್ಲೇ ಮೊದಲ ಬಾರಿಗೆ ಪರಿಸರ ಸ್ನೇಹಿ ಹಾಲಿನ ಪ್ಯಾಕೆಟ್ ಬಳಕೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಬಮೂಲ್ನಿಂದ ಕನಕಪುರದಲ್ಲಿ ಪ್ರಾಯೋಗಿಕವಾಗಿ ಹೊಸ ಪರಿಸರ ಸ್ನೇಹಿ ನಂದಿನಿ ಹಾಲಿನ ಪ್ಯಾಕೆಟ್ ಬಿಡುಗಡೆ ಮಾಡಲಾಗಿದೆ. ಪರಿಸರ ಸಂರಕ್ಷಣೆ, ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಆದ್ಯತೆ ನೀಡುತ್ತಿದೆ ಕಾಂಗ್ರೆಸ್ ಸರ್ಕಾರ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa