ನವದೆಹಲಿ, 07 ಜೂನ್ (ಹಿ.ಸ.) :
ಆ್ಯಂಕರ್ : ಬಕ್ರೀದ್ ಹಬ್ಬದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧಂಖರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮುಸ್ಲಿಂ ಸಮುದಾಯಕ್ಕೆ ಶುಭಾಶಯ ಕೋರಿದ್ದಾರೆ.
ರಾಷ್ಟ್ರಪತಿ ಮುರ್ಮು ಅವರು ಈ ಹಬ್ಬವು ತ್ಯಾಗ, ನಂಬಿಕೆ ಮತ್ತು ಉದಾತ್ತ ಆದರ್ಶಗಳ ಮಹತ್ವವನ್ನು ಒತ್ತಿಹೇಳುತ್ತದೆ ಎಂದು ತಿಳಿಸಿದ್ದಾರೆ.
ಉಪರಾಷ್ಟ್ರಪತಿ ಧಂಖರ್ ಅವರು, ಈ ಹಬ್ಬವು ಔದಾರ್ಯ ಮತ್ತು ನಿಸ್ವಾರ್ಥ ಸೇವೆಯ ಮೌಲ್ಯಗಳನ್ನು ಸಾರುತ್ತದೆ ಎಂದು ತಮ್ಮ ಸಂದೇಶದಲ್ಲಿ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa