ಕೋಲಾರ, ಜೂ 0೭ (ಹಿ.ಸ) :
ಆ್ಯಂಕರ್ : ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಕೋಲಾರ ಜಿಲ್ಲಾ ನೂತನ ಉಪಾಧ್ಯಕ್ಷರಾಗಿ ಟಿ. ಸುಬ್ಬರಾಮಯ್ಯ, ಜಿಲ್ಲಾ ಕೋಶಾಧ್ಯಕ್ಷರಾಗಿ ಮುನೇಗೌಡ ಆಯ್ಕೆ ಆಗಿದ್ದಾರೆ .
ನಗರದ ದಕ್ಷಿಣ ಸ್ವಾದ ದಲ್ಲಿಂದು ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆದಿದ್ದು, ಸಂಘಟನಾ ಕಾರ್ಯದರ್ಶಿಯಾಗಿ ಮಂಜುಳಾ, ಸಹ ಕಾರ್ಯದರ್ಶಿಯಾಗಿ ಮಂಜುಳಾ ರವರುಗಳಿಗೆ ನೇಮಕಾತಿ ಆದೇಶ ನೀಡಿ ಗೌರವಿಸಸಲಾಯಿತು .
ಸಭೆಯ ಅಧ್ಯಕ್ಷತೆಯನ್ನು ಸಮಿತಿಯ ಜಿಲ್ಲಾಧ್ಯಕ್ಷ ಜಿ.ಶ್ರೀನಿವಾಸ್ ವಹಿಸಿದ್ದು, ಉಪಾಧ್ಯಕ್ಷರಾದ ಕೆ.ಸಿ.ಪದ್ಮಾವತಿ, ಜಿಲ್ಲಾ ಸಂಯೋಜಕ ಕೆ ವಿ ಜಗನ್ನಾಥ್ ಮತ್ತಿತರರು ಉಪಸ್ಥಿತರಿದ್ದರು.
ಚಿತ್ರ : ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಕೋಲಾರ ಜಿಲ್ಲಾ ನೂತನ ಉಪಾಧ್ಯಕ್ಷರಾಗಿ ಟಿ.ಸುಬ್ಬರಾಮಯ್ಯ ಆಯ್ಕೆಯಾದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್