ಬೆಂಗಳೂರು, 07 ಜೂನ್ (ಹಿ.ಸ.) :
ಆ್ಯಂಕರ್ : ಮೈಸೂರು ನಗರದ ವೀರಶೈವ ಲಿಂಗಾಯತ ಭವನ ನಿರ್ಮಾಣ ಕಾರ್ಯಕ್ಕೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ವತಿಯಿಂದ ₹1 ಕೋಟಿ ನೆರವನ್ನು ನೀಡಲಾಗಿದ್ದು, ಮಹಾಸಭೆಯ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ಸ್ಥಳೀಯ ಘಟಕದ ಅಧ್ಯಕ್ಷರಾದ ಹಿನಕಲ್ ಬಸವರಾಜ್ ಅವರಿಗೆ ಹಸ್ತಾಂತರ ಮಾಡಿದರು.
ಈ ಪೈಕಿ ₹50 ಲಕ್ಷ ಮೊತ್ತವನ್ನು ಸದಸ್ಯತ್ವ ಮೊತ್ತದ ಶೇ.90ರಷ್ಟು ಅನುಪಾತದಲ್ಲಿ ಕಟ್ಟಡ ನಿರ್ಮಾಣಕ್ಕೆ ನೇರವಾಗಿ ಬಳಸಲಾಗುತ್ತದೆ ಮತ್ತು ಉಳಿದ ₹50 ಲಕ್ಷವನ್ನು ಬಡ್ಡಿರಹಿತ ಸಾಲವಾಗಿ ನೀಡಲಾಗಿದೆ ಎಂದು ಖಂಡ್ರೆ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa