ಚಿಕ್ಕಮಗಳೂರು, 07 ಜೂನ್ (ಹಿ.ಸ.) :
ಆ್ಯಂಕರ್ : ಚಿಕ್ಕಮಗಳೂರು ತಾಲ್ಲೂಕಿನ ಕೆಮ್ಮಣ್ಣುಗುಂಡಿ ಮಹಲ್ – ಅತ್ತಿಗುಂಡಿ ರಸ್ತೆ ಮಾರ್ಗವು ರಾಜ್ಯ ಹೆದ್ದಾರಿ 257 ರಿಂದ ರಾಜ್ಯ ಹೆದ್ದಾರಿ 57 ರವರೆಗೆ ಸಂಪರ್ಕಿಸುತ್ತದೆ. ಈ ರಸ್ತೆಯು ಕಿ.ಮೀ. 123.30 ಹತ್ತಿರ ಅತಿಯಾದ ಮಳೆಯಿಂದಾಗಿ ಕೊರೆದಿರುವ ಹಿನ್ನೆಲೆಯಲ್ಲಿ ರಸ್ತೆ ಅಂಚಿಗೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು ಇಂದು ಸ್ಥಳಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa