ಆರ್​​ಸಿಬಿ ಆಡಳಿತ ಮಂಡಳಿಗೆ ಕನಸು ಬಿದ್ದಿತ್ತಾ : ಕುಮಾರಸ್ವಾಮಿ
ಬೆಂಗಳೂರು, 07 ಜೂನ್ (ಹಿ.ಸ.) : ಆ್ಯಂಕರ್ : ಅಂತಿಮ‌ ಪಂದ್ಯ ಆರಂಭವಾಗುವುದಕ್ಕೆ ಮೊದಲೇ ಆರ್​​ಸಿಬಿ ಆಡಳಿತ ಮಂಡಳಿ ವಿಜಯೋತ್ಸವ ಆಚರಿಸುವುದಾಗಿ ನಗರ ಪೊಲೀಸರಿಗೆ ಅರ್ಜಿ ಸಲ್ಲಿಸಿದ್ದ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ, ಗೆಲ್ಲುತ್ತೇವೆ ಎಂದು ಆರ್​​ಸಿಬಿ ತ
ಆರ್​​ಸಿಬಿ ಆಡಳಿತ ಮಂಡಳಿಗೆ ಕನಸು ಬಿದ್ದಿತ್ತಾ : ಕುಮಾರಸ್ವಾಮಿ


ಬೆಂಗಳೂರು, 07 ಜೂನ್ (ಹಿ.ಸ.) :

ಆ್ಯಂಕರ್ : ಅಂತಿಮ‌ ಪಂದ್ಯ ಆರಂಭವಾಗುವುದಕ್ಕೆ ಮೊದಲೇ ಆರ್​​ಸಿಬಿ ಆಡಳಿತ ಮಂಡಳಿ ವಿಜಯೋತ್ಸವ ಆಚರಿಸುವುದಾಗಿ ನಗರ ಪೊಲೀಸರಿಗೆ ಅರ್ಜಿ ಸಲ್ಲಿಸಿದ್ದ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ, ಗೆಲ್ಲುತ್ತೇವೆ ಎಂದು ಆರ್​​ಸಿಬಿ ತಂಡಕ್ಕೆ ಕನಸು ಬಿದ್ದಿತ್ತಾ ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಅಹಮದಾಬಾದ್​​ನಲ್ಲಿ ಫೈನಲ್​ ಪಂದ್ಯ ಆರಂಭವಾಗಿದ್ದು ರಾತ್ರಿ ಏಳೂವರೆ ಗಂಟೆಗೆ. ಇಲ್ಲಿ ನೋಡಿದರೆ ಆರು ಗಂಟೆಗೆಲ್ಲ ವಿಜಯೋತ್ಸವ ಮಾಡುತ್ತೇವೆ, ನಮಗೆ ಅನುಮತಿ ಕೊಡಿ ಎಂದು ಪೊಲೀಸರಿಗೆ ಆರ್​​ಸಿಬಿ ಅವರು ಅರ್ಜಿ ಕೊಡುತ್ತಾರೆ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಮಾಡುತ್ತೇವೆ ಎಂದು ಅರ್ಜಿ ಹಾಕಿದ್ದಾರೆ. ಇದು ಹೇಗೆ ಸಾಧ್ಯ? ಪದ್ಯ ಆರಂಭಕ್ಕೆ ಮೊದಲೇ ಆರ್​​ಸಿಬಿ ಆಡಳಿತ ಮಂಡಳಿಗೆ ತಮ್ಮ ತಂಡ ಗೆಲುತ್ತದೆ ಎಂದು ಹೇಗೆ ಗೊತ್ತು? ಎಂದು ಪ್ರಶ್ನೆ ಮಾಡಿದ್ದಾರೆ.

ನಾವು ಗೆಲ್ಲುತ್ತೇವೆ ಎಂದು ಇವರಿಗೇನು ಕನಸು ಬಿದ್ದಿತ್ತಾ? ಫೈನಲ್ ಗೆಲ್ಲುವ ಕುರಿತು ಮೊದಲೇ ಗೊತ್ತಿತ್ತಾ? ಇನ್ನು ಫೈನಲ್ ಮ್ಯಾಚ್ ಶುರು ಆಗದೇ ಇವರು ಅರ್ಜಿ ಕೊಡುತ್ತಾರೆ. ಇನ್ನೊಂದು ಅರ್ಜಿಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಕೊಟ್ಟು ವಿಧಾನಸೌಧದ ಮುಂಭಾಗದಲ್ಲಿ ಕಾರ್ಯಕ್ರಮ ಮಾಡಲು ಅವಕಾಶ ಕೊಡಿ ಎಂದು ಕೇಳುತ್ತಾರೆ? ಇದು ಹೇಗೆ ಸಾಧ್ಯ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande