ಶಿವಮೊಗ್ಗ, 08 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮವು ಶಿವಮೊಗ್ಗ ಜಿಲ್ಲೆಯಲ್ಲಿ 2025-26ನೇ ಸಾಲಿನ ಶೈಕ್ಷಣಿಕ ಸಾಲ, ಜೀವಜಲ, ಕಾಯಕಕಿರಣ, ಭೋಜನಾಲಯ, ವಿಭೂತಿ ಘಟಕ, ಸಾರಥಿ ಯೋಜನೆ, ಕೌಶಲ್ಯಾಭಿವೃದ್ಧಿ ಹಾಗೂ ಸ್ವಸಹಾಯ ಸಂಘಗಳ ಉತ್ತೇಜನ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ.
ಅರ್ಹರು ಜೂನ್ 30ರೊಳಗೆ ಸೇವಾಸಿಂಧು ಪೋರ್ಟಲ್ (sevasindhu.karnataka.gov.in) ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಆಧಾರ್ ಸೀಡಿಂಗ್ ಹಾಗೂ ಮೊಬೈಲ್ ಜೋಡಣೆ ಮಾಡಿರಬೇಕು.
ಹೆಚ್ಚಿನ ಮಾಹಿತಿಗೆ ನಿಗಮದ ವೆಬ್ಸೈಟ್ kvldcl.karnataka.gov.in ಅಥವಾ ಜಿಲ್ಲಾ ಕಚೇರಿಗೆ ಸಂಪರ್ಕಿಸಬಹುದು (ದೂ.ಸಂ.: 08182-229634).
ಹಿಂದೂಸ್ತಾನ್ ಸಮಾಚಾರ್ / Rakesh Mahadevappa