ಕಾಲ್ತುಳಿತ; ಸರ್ಕಾರಿ ಪ್ರಾಯೋಜಿತ ಕೊಲೆ-ಪ್ರತಿಪಕ್ಷ ನಾಯಕ ಅಶೋಕ
ಬೆಂಗಳೂರು, 08 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ವಿಧಾನ ಸೌಧದ ಭದ್ರತಾ ವಿಭಾಗದ ಉಪ ಪೋಲಿಸ್ ಆಯುಕ್ತರು ಐಪಿಎಲ್ ವಿಜಯೋತ್ಸವ ಆಯೋಜಿಸಲು ಹೆಚ್ಚಿನ ಕಾಲಾವಕಾಶ, ಪೂರ್ವಸಿದ್ಧತೆ, ಮುಂಜಾಗ್ರತಾ ಕ್ರಮಗಳು ಅಗತ್ಯವಿದೆ ಎಂದು ಬುಧವಾರದಂದು (04-06-2025) ಸರಕಾರಕ್ಕೆ ಬರೆದ ಪತ್ರದಲ್ಲಿ ಸ್ಪಷ್ಟವಾಗಿ ತಮ್ಮ ಅಭ
Ashok


Ashok


ಬೆಂಗಳೂರು, 08 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ವಿಧಾನ ಸೌಧದ ಭದ್ರತಾ ವಿಭಾಗದ ಉಪ ಪೋಲಿಸ್ ಆಯುಕ್ತರು ಐಪಿಎಲ್ ವಿಜಯೋತ್ಸವ ಆಯೋಜಿಸಲು ಹೆಚ್ಚಿನ ಕಾಲಾವಕಾಶ, ಪೂರ್ವಸಿದ್ಧತೆ, ಮುಂಜಾಗ್ರತಾ ಕ್ರಮಗಳು ಅಗತ್ಯವಿದೆ ಎಂದು ಬುಧವಾರದಂದು (04-06-2025) ಸರಕಾರಕ್ಕೆ ಬರೆದ ಪತ್ರದಲ್ಲಿ ಸ್ಪಷ್ಟವಾಗಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಪೊಲೀಸ್ ಅಧಿಕಾರಿಗಳ ಈ ಲಿಖಿತ ಎಚ್ಚರಿಕೆಯನ್ನೂ ಕಡೆಗಣಿಸಿ ವಿಜಯೋತ್ಸವ ಆಚರಿಸಲು ಮುಂದಾಗಿದ್ದು ಯಾಕೆ ಎಂದು ಕರ್ನಾಟಕ ವಿಧಾನ ಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಅವರು, ಪೊಲೀಸ್ ಅಧಿಕಾರಿಗಳ ಎಚ್ಚರಿಕೆಯನ್ನೂ ಲೆಕ್ಕಿಸದೆ ವಿಜಯೋತ್ಸವ ಆಚರಿಸಲು ಹಠಕ್ಕೆ ಬಿದ್ದಿದ್ದು ಯಾರು?

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಗೃಹ ಸಚಿವ ಪರಮೇಶ್ವರ ಅವರು ಉತ್ತರಿಸಬೇಕಾದ ಪ್ರಶ್ನೆಗಳು ಬಹಳಷ್ಟಿವೆ‌ ಎಂದಿರುವ ಅವರು, ನೂರಕ್ಕೆ ನೂರು ಗ್ಯಾರೆಂಟಿ. ಇದೊಂದು ಸರ್ಕಾರಿ ಪ್ರಾಯೋಜಿತ ಕಾಲ್ತುಳಿತ, ಸರ್ಕಾರಿ ಪ್ರಾಯೋಜಿತ ಕೊಲೆ ಎಂದು ಅಶೋಕ ಆರೋಪಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande