ಕಾಂಗ್ರೆಸ್ ಸರಕಾರ ಸರ್ವನಾಶವಾಗಲಿದೆ : ಅಶೋಕ
ಬೆಂಗಳೂರು, 08 ಜೂನ್ (ಹಿ.ಸ.) : ಆ್ಯಂಕರ್ : ಬೆಂಗಳೂರು ಕಾಲ್ತುಳಿತ ಪ್ರಕರಣ ಕುತ್ತಿಗೆಗೆ ಬರುತ್ತಿದ್ದಂತೆ ಕೆಎಸ್ಸಿಎ ಸಂಸ್ಥೆಯನ್ನ ಬಲಿಪಶು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮುಂದಿನ ಭಾಗವಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಾಹೀರಾತು ತೆರಿಗೆ ಬಾಕಿ ನೆಪದಲ್ಲಿ ಬಿಬಿಎಂಪಿ ಮೂಲಕ
Ashok


ಬೆಂಗಳೂರು, 08 ಜೂನ್ (ಹಿ.ಸ.) :

ಆ್ಯಂಕರ್ : ಬೆಂಗಳೂರು ಕಾಲ್ತುಳಿತ ಪ್ರಕರಣ ಕುತ್ತಿಗೆಗೆ ಬರುತ್ತಿದ್ದಂತೆ ಕೆಎಸ್ಸಿಎ ಸಂಸ್ಥೆಯನ್ನ ಬಲಿಪಶು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಮುಂದಿನ ಭಾಗವಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಾಹೀರಾತು ತೆರಿಗೆ ಬಾಕಿ ನೆಪದಲ್ಲಿ ಬಿಬಿಎಂಪಿ ಮೂಲಕ ಕೆಎಸ್ ಸಿಎ ಸಂಸ್ಥೆಯ ನಟ್ಟು ಬೋಲ್ಟು ಟೈಟು ಮಾಡಲು ಮುಂದಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಅವರು, ಮಾಡಿರುವ ತಪ್ಪನ್ನ ಒಪ್ಪಿಕೊಂಡು ರಾಜೀನಾಮೆ ಕೊಡುವ ಬದಲು ಒಂದು ತಪ್ಪನ್ನ ಮುಚ್ಚಿಕೊಳ್ಳಲು ತಪ್ಪಿನ ಮೇಲೆ ತಪ್ಪು ಮಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಸರ್ವನಾಶ ಆಗುವುದರಲ್ಲಿ ಸಂಶಯವೇ ಇಲ್ಲ ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande