ಲಿಖಿತ ದೂರು ಸಲ್ಲಿಸುವಂತೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ಸೂಚನೆ
ನವದೆಹಲಿ, 08 ಜೂನ್ (ಹಿ.ಸ.) : ಆ್ಯಂಕರ್ : ಸಾರ್ವಜನಿಕ ವೇದಿಕೆಗಳಲ್ಲಿ ಆರೋಪಗಳನ್ನು ಮಾಡುವ ಬದಲು ಲಿಖಿತ ದೂರು ಸಲ್ಲಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ತಿಳಿಸಿದೆ. ಮೇ 15ರಂದು ಆಯೋಗದಿಂದ ಆಹ್ವಾನ ಬಂದಿದ್ದರೂ ಕಾಂಗ್ರೆಸ್ ಪಕ್ಷ ಮುಂದಿನ ಸಭೆಗೆ ಹಾಜರಾಗುವುದಾಗಿ ತಿಳಿಸಿದ್ದು, ಇ
EC


ನವದೆಹಲಿ, 08 ಜೂನ್ (ಹಿ.ಸ.) :

ಆ್ಯಂಕರ್ : ಸಾರ್ವಜನಿಕ ವೇದಿಕೆಗಳಲ್ಲಿ ಆರೋಪಗಳನ್ನು ಮಾಡುವ ಬದಲು ಲಿಖಿತ ದೂರು ಸಲ್ಲಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ತಿಳಿಸಿದೆ. ಮೇ 15ರಂದು ಆಯೋಗದಿಂದ ಆಹ್ವಾನ ಬಂದಿದ್ದರೂ ಕಾಂಗ್ರೆಸ್ ಪಕ್ಷ ಮುಂದಿನ ಸಭೆಗೆ ಹಾಜರಾಗುವುದಾಗಿ ತಿಳಿಸಿದ್ದು, ಇದುವರೆಗೆ ಯಾವುದೇ ಲಿಖಿತ ಪ್ರತಿಕ್ರಿಯೆ ಸಲ್ಲಿಸಿಲ್ಲ.

ಮಹಾರಾಷ್ಟ್ರ ಚುನಾವಣೆ ಸಂಬಂಧವಾಗಿ ರಾಹುಲ್ ಗಾಂಧಿ ಐದು ಪ್ರಮುಖ ಅಕ್ರಮಗಳ ಬಗ್ಗೆ ಆರೋಪ ಮಾಡಿದ್ದಾರೆ – ಚುನಾವಣಾ ಆಯುಕ್ತರ ನೇಮಕಾತಿಯಲ್ಲಿ ಪಕ್ಷಪಾತ, ನಕಲಿ ಮತದಾರರ ಪಟ್ಟಿ, ಮತದಾನದ ಪ್ರಮಾಣ ಹೆಚ್ಚಿಸುವುದು, ನಕಲಿ ಮತದಾನ ಹಾಗೂ ಸಿಸಿಟಿವಿ ದೃಶ್ಯಾವಳಿ ನೀಡದಿರುವುದು.

ಆಯೋಗವು ಈ ಎಲ್ಲ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದು, ಲಿಖಿತವಾಗಿ ದೂರು ಸಲ್ಲಿಸಿದರೆ ತನಿಖೆಗೆ ಸಿದ್ಧವಿದೆ ಎಂದು ತಿಳಿಸಿದೆ. ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿರುವ ಲಕ್ಷಾಂತರ ಚುನಾವಣಾ ಸಿಬ್ಬಂದಿಗೆ ಇಂತಹ ಆರೋಪಗಳು ಧಕ್ಕೆಯಾಗುತ್ತವೆ ಎಂಬುದಾಗಿ ಆಯೋಗ ಅಭಿಪ್ರಾಯಪಟ್ಟಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande